Bengaluru

ಅರಮನೆ ರಸ್ತೆಯಲ್ಲಿ ಸರ್ಕಾರಿ ಬಸ್‌ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದಾರುಣ ಸಾವು

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿ ನಡೆದಿದೆ. ಐವತ್ತು ವರ್ಷದ ಲಕ್ಷ್ಮೀದೇವಿ ಅಪಘಾತದಲ್ಲಿ ಮೃತಪಟ್ಟವರು. ಸಹೋದರ ಜೊತೆ ಬೈಕ್‌ನಲ್ಲಿ ಲಕ್ಷ್ಮೀದೇವಿ ಅವರು ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಬಸ್‌ ಡಿಕ್ಕಿ ಹೊಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಅರಮನೆ ರಸ್ತೆಯಲ್ಲಿ ಬಸ್‌ ಚಾಲಕನ ಅಜಾಗರಕತೆಯಿಂದ ಈ ಅಪಘಾತ ಸಂಭವಿಸಿದೆ. ಮೃತ ಲಕ್ಷ್ಮೀದೇವಿ ಚಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯವರಾಗಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ತನ್ನ ಸಹೋದರನ ಮನೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

Share Post