BengaluruCrime

ಬಿಎಂಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು; ಸುಬ್ಬಯ್ಯ ಸರ್ಕಲ್‌ನಲ್ಲಿ ದಾರುಣ ಘಟನೆ

ಬೆಂಗಳೂರು; ರಸ್ತೆ ದಾಟುವಾಗಿ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಬ್ಬಯ್ಯ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಐವತ್ತೊಂದು ವರ್ಷದ ಪುಷ್ಪ ಎಂಬುವವರು ಸಾವನ್ನಪ್ಪಿದ್ದಾರೆ.

ಪುಷ್ಪ ಅವರು ಕಬ್ಬನ್‌ ಪೇಟೆ ನಿವಾಸಿಯಾಗಿದ್ದಾರೆ. ಇವರು ಬೇಕರಿಗೆ ತೆರಳುತ್ತಿದ್ದರು. ಈ ವೇಳೆ ಅವರು ರಸ್ತೆ ದಾಟಲು ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಬಂದ ಬಿಎಂಟಿಸಿ ಬಸ್ಸೊಂದು ಅವರ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತು.

ಆದ್ರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಬಸ್‌ ಚಾಲಕ ನಾಗರಾಜ್‌ನನ್ನು ಹಲಸೂರು ಗೇಟ್‌ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

Share Post