BengaluruCrime

ಬೆಂಗಳೂರಲ್ಲಿ ಮಹಿಳೆಯನ್ನು ಕೊಲೆ ಮಾಡಿ ಪೀಸ್‌ ಪೀಸ್‌ ಮಾಡಿದ ದುರುಳರು..!

ಆನೇಕಲ್; 

ದೆಹಲಿಯಲ್ಲಿ ಶ್ರದ್ಧಾ ವಾಕರ್‌ ಎಂಬಾಕೆಯನ್ನು ಕೊಂದು ಪೀಸ್‌ ಪೀಸ್‌ ಮಾಡಿದ್ದ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಇನ್ನು ಮೊನ್ನೆಯಷ್ಟೇ ಮುಂಬೈನಲ್ಲಿ ಸರಸ್ವತಿ ವೈದ್ಯ ಎಂಬಾಕೆಯನ್ನು ಕೊಂದು ಪೀಸ್‌ ಪೀಸ್‌ ಮಾಡಿ ಕುಕ್ಕರ್‌ನಲ್ಲಿ ಬೇಯಿಸಲಾಗಿತ್ತು. ಇದೀಗ ಅಂತಹದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಹಾರದಿಂದ ಬೆಂಗಳೂರಿಗೆ  ಉದ್ಯೋಗ ಅರಸಿ ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿದ್ದಾರೆ. ನಂತರ ಆಕೆಯ ದೇಹವನ್ನು ಪೀಸ್ ಪೀಸ್ ಮಾಡಿ ಎಸೆದು ಹೋಗಿದ್ದಾರೆ.  ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ಎಸಗಲಾಗಿದೆ.

ಗೀತಾ ಎಂಬಾಕೆಯೇ ಕೊಲೆಯಾದ ಮಹಿಳೆ. ಆರೋಪಿ ಇಂದಲ್ ಕುಮಾರ್ ಎಂಬಾತ ಸಿಕ್ಕಿಬಿದ್ದಿದ್ದಾನೆ. ಉಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರನ್ನ ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಿತ್ತು.

ಯುವಕರು ಗೀತಾ ಮನೆಯಲ್ಲಿ ಬಾಡಿಗೆಗಿದ್ದರು. ಆ ಮನೆಯನ್ನು ತಮ್ಮ ಹೆಸರಿಗೇ ಮಾಡಿಕೊಡುವಂತೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಆಕೆ ಕೊಡದಿದ್ದಾಗ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Share Post