Bengaluru

ಬೆಂಗಳೂರಿನ ಖಾಸಗಿ ಕಾಲೇಜು ಪ್ರೊಫೆಸರ್‌ ನೇಣಿಗೆ ಶರಣು

ಬೆಂಗಳೂರು; ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಪ್ರೊಫೆಸರ್‌ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಜ್ಞಾನಜ್ಯೋತಿ ನಗರದ ಕದಂಬ ಲೇಔಟ್‌ನ ಮನೆಯಲ್ಲಿ ಪ್ರೊಫೆಸರ್‌ ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚೈತ್ರಾ ಖಾಸಗಿ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿದ್ದರು. ಅವರ ಪತಿ ಗುರುಪ್ರಸಾದ್‌ ಶಿಗ್ಗಾವಿಯಲ್ಲಿ ಕರ್ನಾಟಕ ಜಾನಪದ ವಿವಿಯಲ್ಲಿ ರಿಜಿಸ್ಟ್ರಾರ್‌ ಆಗಿದ್ದಾರೆ. ಅವ್ರು ಹಾವೇರಿಯಲ್ಲಿದ್ದಾಗ ಬೆಂಗಳೂರಿನಲ್ಲಿ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪತಿ ಕರೆ ಮಾಡಿದಾಗ ಚೈತ್ರಾ ರಿಸೀವ್‌ ಮಾಡಿಲ್ಲ. ಹೀಗಾಗಿ ಗಾಬರಿಗೊಂಡು ಚೈತ್ರಾ ಸಹೋದರನಿಗೆ ಕರೆ ಮಾಡಿ ವಿಷಯ ಹೇಳಿದ್ದಾರೆ. ಚೈತ್ರಾ ಸಹೋದರ ಮನೆ ಬಳಿ ಬಂದು ನೋಡಿದಾಗ, ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಸಾವಿಗೆ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ. ನಾನು ಕಾಯಿಲೆಯಿಂದ ಬಳಲುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ. ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share Post