BengaluruPolitics

ತಂದೆ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಲ್ಲಿ ನೋಡಲು ಇಷ್ಟಪಡ್ತೀನಿ; ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು; ಜನರಿಗೆ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಆಸೆ ಇದೆ. ಹೀಗಾಗಿ ನನ್ನ ತಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದೆ ಖುಷಿ ಪಡುತ್ತೇನೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಾಸಕಾಂಗ ಸಭೆಯಲ್ಲಿ ಏನು ತೀರ್ಮಾನ ಆಗುತ್ತೋ ಗೊತ್ತಿಲ್ಲ. ಆದ್ರೆ ಒಬ್ಬ ಮಗನಾಗಿ ನನ್ನ ತಂದೆಯನ್ನು ಸಿಎಂ ಸ್ಥಾನದಲ್ಲಿ ನೋಡೋದಕ್ಕೆ ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಸಿಎಂ ಯಾರಾಗಬೇಕು ಎಂದು ಇಷ್ಟಪಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜೊತೆಗೆ ಹೈಕಮಾಂಡ್‌ ಅಂತಿಮವಾಗಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಆದ್ರೆ ಸಿದ್ದರಾಮಯ್ಯ ಅವರು ಸಿಎಂ ಆಗಬೇಕು ಅನ್ನೋದು ಜನರ ಆಸೆಯಾಗಿದೆ. ಅವರು ಸಿದ್ಧಾಂತದ ರಾಜಕಾರಣಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Share Post