BengaluruPolitics

Yadiyurappa; ನಾವು ಎಂದೂ ಜಾತಿ ರಾಜಕೀಯ ಮಾಡಿಲ್ಲ ; ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು; ಈ ಬಾರಿಯೂ ಬಿಜೆಯೇ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ಈ ಬಾರಿ 135-140 ಸ್ಥಾನ ಗಳಿಸುವ ವಿಶ್ವಾಸ ನನಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಾವು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಹೇಳಿದರು.

ನಾವು ಎಂದೂ ಕೂಡಾ ಜಾತಿ ರಾಜಕಾರಣ ಮಾಡಿಲ್ಲ ಎಂದಿರುವ ಯಡಿಯೂರಪ್ಪ, ಕರ್ನಾಟಕದಲ್ಲಿ ಹಿಂದೂ, ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಹುಲ್‌, ಪ್ರಿಯಾಂಕಾ ಗಾಂಧಿ ಬಿಡುವಿಲ್ಲದೆ ಪ್ರಚಾರ ಮಾಡಿದರು. ಆದ್ರೆ ಅಲ್ಲಿ ಕಾಂಗ್ರೆಸ್‌ಗೆ ಸಿಕ್ಕಿದ್ದು ನಾಲ್ಕೈದು ಸ್ಥಾನ ಮಾತ್ರ ಎಂದ ಯಡಿಯೂರಪ್ಪ, ಕರ್ನಾಟಕದಲ್ಲೂ ಕಾಂಗ್ರೆಸ್‌ ಧೂಳಿಪಟವಾಗಲಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಕೊವಿಡ್‌ ಸಂದರ್ಭದಲ್ಲಿ ಉತ್ತಮವಾದ ಕೆಲಸ ಮಾಡಿದೆ. ಕೋವಿಡ್‌ ಬಂದಾಗ ನಮ್ಮ ಜೊತೆ ಮೋದಿ ನಿಂತಿದ್ದರು. ಇನ್ನು ಮಕ್ಕಳ ಶಿಕ್ಷಣಕ್ಕೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇನೆ. ಸರ್ಕಾರ ರೈತರ ಮಕ್ಕಳೀಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದೆ. ಮನೆಮನೆಗೂ ಶುದ್ಧ ಕುಡಿಯುವ ನೀರು ಒದಗಿಸಿದ್ದೇವೆ. ಮೋದಿ ಪ್ರಧಾನಿ ಆದ ಮೇಲೆ ದೇಶದ ಆರ್ಥಿಕತೆ ಸದೃಢವಾಗಿದೆ. ಆರ್ಥಿಕ ಸದೃಢ ರಾಷ್ಟ್ರಗಳಲ್ಲಿ ಭಾರತ ಕೂಡಾ ಸ್ಥಾನ ಪಡೆದುಕೊಂಡಿದೆ ಎಂದು ಯಡಿಯೂರಪ್ಪ ಹೇಳಿದರು. ಮುಂದಿನ ಪೀಳಿಗೆಗಾಗಿ ಮೋದಿಯವರ ಕೈಬಲಪಡಿಸಬೇಕು ಎಂದು ಯಡಿಯೂರಪ್ಪ ಇದೇ ವೇಳೆ ಕರೆ ನೀಡಿದರು.

Share Post