BengaluruPolitics

ಬುಧವಾರದಿಂದ ಯಡಿಯೂರಪ್ಪ ಪ್ರವಾಸ; ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಪ್ರಚಾರ

ಬೆಂಗಳೂರು; ಮೊನ್ನೆಯಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಬಸ್‌ ಯಾತ್ರೆ ಮಾಡುತ್ತಿದ್ದಾರೆ. ಇದೀಗ ಮಾಜಿ ಸಿಎಂ ಯಡಿಯೂರಪ್ಪ ಕೂಡಾ ರಾಜ್ಯ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದಾರೆ. ಬುಧವಾರದಿಂದ ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮೇ 8ರವರೆಗೆ ನಿರಂತರವಾಗಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಜಗದೀಶ್‌ ಶೆಟ್ಟರ್‌ ಹಾಗೂ ಸವದಿ ಕಾಂಗ್ರೆಸ್‌ ಸೇರಿದ್ದರಿಂದಾಗಿ ಲಿಂಗಾಯತ ಬೆಲ್ಟ್‌ನಲ್ಲಿ ಬಿಜೆಪಿಗೆ ಡ್ಯಾಮೇಜ್‌ ಆಗಿದೆ. ಈ ಡ್ಯಾಮೇಜ್‌ ಕಂಟ್ರೋಲ್‌ ಮಾಡೋದಕ್ಕಾಗಿ ಯಡಿಯೂರಪ್ಪ ಈ ಪ್ರವಾಸ ನಡೆಸುತ್ತಿದ್ದಾರೆ. ಲಿಂಗಾಯತರು ಹೆಚ್ಚು ಭಾಗಗಳನ್ನೇ ಟಾರ್ಗೆಟ್‌ ಮಾಡ್ಕೊಂಡು ಯಡಿಯೂರಪ್ಪ ರೋಡ್‌ ಶೋ ಹಾಗೂ ಬಹಿರಂಗ ಸಸಭೆಗಳನ್ನು ನಡೆಸಲಿದ್ದಾರೆ. ಸುಮಾರು 85ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.

ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳು, ಕಲ್ಯಾಣ ಕರ್ನಾಟಕದ 40 ಕ್ಷೇತ್ರಗಳು ಹಾಗೂ ಮಧ್ಯ ಕರ್ನಾಟಕದ 21 ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರಚಾರ ಭಾಷಣಗಳನ್ನು ಮಾಡಲಿದ್ದಾರೆ.

Share Post