BengaluruPolitics

ಬಿಜೆಪಿ ಸೋಲಿಗೆ ಯಡಿಯೂರಪ್ಪರ ಶಾಸಪ ಕಾರಣ; ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಶಾಪನೇ ಕಾರಣ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಬಿಜೆಪಿ ಸಭೆಗೆ ಗೈರು ಹಾಜರಾಗಿದ್ದರ ಬಗ್ಗೆ ಮಾತನಾಡಿದ ಅವರು, ಬಿ.ಎಲ್‌.ಸಂತೋಷ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಿದವರು ಬಿಜೆಪಿಯನ್ನು ಕಟ್ಟಿ ಬೆಳೆಸಿದವರಲ್ಲ. ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನೆಲ್ಲಾ ಮುಗಿಸಲಾಗಿದೆ. ಬಿ.ಎಲ್.‌ಸಂತೋಷ್‌ ಅವರಿಗೆ ಸಿಎಂ ಆಗಬೇಕೆಂಬ ಆಸೆ ಇದೆ. ಇದಕ್ಕಾಗಿ ಅವರು ಇಡೀ ಪಕ್ಷವನ್ನು ಕಂಟ್ರೋಲ್‌ ಮಾಡುತ್ತಿದ್ದಾರೆ. ಪಕ್ಷದಲ್ಲಿ ಹಿಡಿತ ಇರಬೇಕು ಅನ್ನೋ ಕಾರಣಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರನ್ನು೮ ಸೈಡ್‌ಲೈನ್‌ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬಿ.ಎಲ್.‌ಸಂತೋಷ್‌ ಅವರ ಪರವಾಗಿ ಒಂದು ಗ್ಯಾಂಗ್‌ ಕೆಲಸ ಮಾಡುತ್ತಿದೆ. ಆ ಗ್ಯಾಂಗ್‌ ನಿನ್ನೆ ಸಭೆ ನಡೆಸಿದೆ. ನಿನ್ನೆ ಸಭೆ ನಡೆಸಿದವರು ಪಕ್ಷವನ್ನು ಕಟ್ಟಿ ಬೆಳೆಸಿಲ್ಲ ಎಂದು ರೇಣುಕಾಚಾರ್ಯ ಕಿಡಿ ಕಾರಿದರು.

Share Post