BengaluruCrime

ಬಿಎಂಟಿಸಿ ಬಸ್‌ಗೆ ಯುವಕ ಬಲಿ; ಪೀಣ್ಯದಲ್ಲಿ ದುರ್ಘಟನೆ

ಬೆಂಗಳೂರು; ಬಸ್‌ನ್ನು ಓವರ್‌ ಟೇಕ್‌ ಮಾಡಲು ಹೋಗಿ ಬಿಎಂಟಿಸಿ ಬಸ್‌ ಟೈರ್‌ ಅಡಿ ಸಿಲುಕಿ ಬೈಕ್‌ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಪೀಣ್ಯದ 14ನೇ ಕ್ರಾಸ್‌ನಲ್ಲಿ ನಡೆದಿದೆ.

ದೀಪಕ್ (30) ಎಂಬ ಯುವಕನೇ ಸಾವನ್ನಪ್ಪಿರುವ ದುರ್ದೈವಿ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯದ ಕಡೆ ತೆರಳುತಿದ್ದ ದೀಪಕ್, ಬಸ್‍ನ್ನು ಓವರ್ ಟೇಕ್ ಮಾಡಲು ಹೋಗಿದ್ದಾನೆ. ಈ ವೇಳೆ ಬೈಕ್‌ ಸ್ಕಿಡ್‌ ಆಗಿ ಬಿದ್ದಿದ್ದು ಆತನ ಬಸ್‌ನಡಿ ಸಿಲುಕಿ ಸಾವನ್ನಪ್ಪಿದ್ದಾನೆ.

ದೀಪಕ್ ಹೆಲ್ಮೆಟ್‌ ಧರಿಸದೇ ಬೈಕ್ ಚಲಾಯಿಸಿದ್ದರ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ದೀಪಕ್ ಮೂಲತಃ ವಾರಣಾಸಿಯವನಾಗಿದ್ದು,  ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ.

 

Share Post