BengaluruCrime

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು; ಬೆಂಗಳೂರಿನಲ್ಲಿ ದಾರುಣ ಘಟನೆ ನಡೆದಿದೆ. ಮಗನ ಸಾಲ ಹಾಗೂ ಮಗಳ ಅನಾರೋಗ್ಯದಿಂದ ಬೇಸತ್ತು, ಮಹಿಳೆ ಹಾಗೂ ಅವರ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ನ ಅಪಾರ್ಟ್ ಮೆಂಟ್ ನಲ್ಲಿ ಈ ದುರ್ಘಟನೆ ನಡೆದಿದೆ. ಮೂವರೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿ ಯಶೋಧಾ (70), ಮಗಳು ಸುಮನ್ (41) ಹಾಗೂ ಮಗ ನರೇಶ್ (31) ಆತ್ಮಹತ್ಯೆಗೆ ಶರಣಾದವರು. ಮಹಾಲಕ್ಷ್ಮೀ ಲೇಔಟ್‍ನ ಅಪಾರ್ಟ್‍ಮೆಂಟ್‍ವೊಂದರಲ್ಲಿ ಯಶೋಧಾ, ಸುಮನ್, ನರೇಶ್ ಮೂವರು ವಾಸಿಸುತ್ತಿದ್ದರು. ಯಶೋಧಾಗೆ ಮತ್ತೊಂದು ಮಗಳಿದ್ದು, ಆಕೆ ಮದುವೆಯಾಗಿ ರಾಜಾಜಿನಗರದಲ್ಲಿ ವಾಸಿಸುತ್ತಿದ್ದಳು.

ನರೇಶ್ ಅಪಾರವಾದ ಸಾಲ ಮಾಡಿಕೊಂಡಿದ್ದರು. ಮಗಳಿಗೆ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Share Post