BengaluruBusinessEconomy

ರಾಜ್ಯದಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ; ಸಜ್ಜನ್‌ ಜಿಂದಾಲ್‌ ಘೋಷಣೆ

ಬೆಂಗಳೂರು; ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಇಂದಿನಿಂದ ಶುರುವಾಗಿದೆ. ಈ ಸಮಾವೇಶದಲ್ಲಿ ಪಾಲ್ಗೊಂಡಿರುವ ಜೆಎಸ್‌ಡಬ್ಲ್ಯೂ ಗ್ರೂಪ್‌ ಅಧ್ಯಕ್ಷ ಸಜ್ಜನ್‌ ಜಿಂದಾಲ್‌, ರಾಜ್ಯದಲ್ಲಿ ಮುಂದಿನ ಏಳು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ತಿಳಿಸಿದ್ದಾರೆ. ಇನ್ನೂ ಹಲವು ಹೂಡಿಕೆದಾರರು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ.

ಸ್ಟರ್ಲೈಟ್‌ ಪವರ್‌ ಸಿಇಒ ಪ್ರತೀಕ್‌ ಅಗರ್ವಾಲ್‌ 50 ಸಾವಿರ ಕೋಟಿ ರೂಪಾಯಿಯನ್ನು ಇಂಧನ ಹಾಗೂ ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡುವುದಾಗಿ ಇದೇ ವೇಳೆ ಘೋಷಣೆ ಮಾಡಿದ್ದಾರೆ.

Share Post