BusinessNational

ಅಂದು ಭ್ರಷ್ಟಾಚಾರವೇ ತುಂಬಿತ್ತು, ಈಗ ಎಲ್ಲವೂ ಬದಲಾಗಿದೆ; ಅಮಿತ್‌ ಷಾ

ಬೆಂಗಳೂರು;  ಹಿಂದಿನ ಸರ್ಕಾರಗಳ ಸಂದರ್ಭದಲ್ಲಿ ಅಕ್ರಮಗಳು ಬಯಲಾಗುತ್ತಲೇ ಇದ್ದವು. ದಿನವೂ ಪತ್ರಿಕೆಗಳ ಮುಖಪುಟಗಳಲ್ಲಿ ಭ್ರಷ್ಟಾಚಾರದ ಹೆಡ್‌ಲೈನ್‌ಗಳೇ ರಾರಾಜಿಸುತ್ತಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಹೇಳಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮ ಉದ್ಘಾಟಿಸಿ  ಅವರು ಮಾತನಾಡಿದರು.

ಈ ಹಿಂದೆ ಎಲ್ಲ ದೇಶಗಳು ಭಾರತವನ್ನು ನೋಡುವ ದೃಷ್ಟಿಯೇ ಬೇರೆ ಇತ್ತು.. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ವ್ಯವಸ್ಥೆ ಸಾಕಷ್ಟು ಸುಧಾರಣೆ ಕಂಡಿದೆ ಎಂದು ಅಮಿತ್‌ ಷಾ ಹೇಳಿದ್ರು.  ನಮ್ಮ ಎಂಟು ವರ್ಷಗಳ ಆಡಳಿತವನ್ನು ಒಮ್ಮೆ ತಿರುಗಿ ನೋಡಿದಾಗ ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆಯನ್ನು ದೇಶದಲ್ಲಿ ನಾವು ನಿರ್ಮಾಣ ಮಾಡಿದ್ದೇವೆ ಎನ್ನುವುದು ಸ್ಪಷ್ಟವಾಗಿ ಕಾಣಿಸಲಿದೆ. ಮುಂದಿನ ಅವಧಿಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಭಾರತ ಮುಂಚೂಣಿಯಲ್ಲಿರಬೇಕು. ಜಗತ್ತನ್ನು ಮುನ್ನಡೆಸುವ ಸಾಲಿನಲ್ಲಿ ಭಾರತ ಮುಂಚೂಣಿಯಲ್ಲಿರಬೇಕು ಎಂದು ಅಮಿತ್‌ ಷಾ ಹೇಳಿದ್ರು.

Share Post