Cinema

ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ಆಗಬೇಕು-ಶಿವಣ್ಣ

 

ಬೆಂಗಳೂರು: ಬೆಳಗಾವಿ ಎಂಇಎಸ್‌ ಉದ್ಧಟತನಕ್ಕೆ ಚಿತ್ರರಂಗದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಅಷ್ಟೇ ಜಗ್ಗೇಶ್‌ ಅವರು ತಮ್ಮ ಟ್ವಿಟ್ಟರ್‌ ಮೂಲಕ ಕನ್ನಡ ಧ್ವಜ ಹಾಕಿ ಆಕ್ರೋಶ ಹೊರಹಾಕಿದ್ದರು. ಈಗ ಶಿವರಾಜ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ” ಎಂದು ಶಿವರಾಜ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಟ್ವೀಟ್‌ ಅನ್ನು ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬೆಳಗಾವಿ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಒತ್ತಾಯ ಮಾಡಿದ್ದಾರೆ. ಟ್ವೀಟ್‌ಗೆ ಡಾ ರಾಜ್‌ಕುಮಾರ್ ಅವರು ಒಂದು ಕೈಯಲ್ಲಿ ಕನ್ನಡದ ಧ್ವಜ ಹಿಡಿದ ಚಿತ್ರ ಹಾಗೂ ಮತ್ತೊಂದು ಕೈಯಲ್ಲಿ, ”ಆಳ್ ಕನ್ನಡ ತಾಯ್, ಬಾಳ್ ಕನ್ನಡ ತಾಯ್” ಎಂಬ ಸಾಲು ಬರೆದಿರುವ ಪ್ಲಕಾರ್ಡ್ ಹಿಡಿದಿರುವ ಚಿತ್ರವನ್ನು ಲಗತ್ತಿಸಿದ್ದಾರೆ. ಶಿವರಾಜ್ ಕುಮಾರ್ ಅವರ ಈ ಟ್ವೀಟ್‌ ಅನ್ನು ಸಾವಿರಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದಾರೆ. ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.

 

Share Post