BengaluruCinema

ಬಾಡಿಗೆ ಮನೆ ಮಾಡಿಕೊಟ್ಟ; ಆಗಾಗ ಬರುತ್ತಿದ್ದವನು ಈಬಾರಿ ಕೊಲೆ ಮಾಡಿ ಹೋದ!

ದೇವನಹಳ್ಳಿ; ಬದುಕಿ ಬಾಳೋಣ ಎಂದು ಪ್ರಿಯತಮೆಯನ್ನು ಬಾಡಿಗೆ ಮನೆಯಲ್ಲಿ ಇರಿಸಿದ್ದ.. ಆಗಾಗ ಮನೆಗೆ ಬಂದು ಹೋಗುತ್ತಿದ್ದ.. ಆದ್ರೆ ನಿನ್ನೆ ಬಂದವನು ಆಕೆಯ ಪ್ರಾಣವನ್ನು ತೆಗೆದುಕೊಂಡು ಹೋಗಿದ್ದಾನೆ..

  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಈ ಘಟನೆ ನಡೆದಿದೆ.. ಆಂಧ್ರ ಮೂಲದ ಹೇಮಾವತಿ ಕೊಲೆಯಾದ ಮಹಿಳೆಯಾಗಿದ್ದಾರೆ.. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

   4 ತಿಂಗಳ ಹಿಂದೆ ಹೊಸಕೋಟೆಯಲ್ಲಿ ವೇಣು ಬಾಡಿಗೆ ಮನೆಮಾಡಿ ಪ್ರಿಯತಮೆಯನ್ನು ಇರಿಸಿದ್ದ. ಹೇಮಾವತಿ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿದ್ದಳು. ನಿನ್ನೆ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.

 

Share Post