CinemaCrime

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್

ಮೈಸೂರು; ಕೊಲೆ ಪ್ರಕಾರಣವೊಂದರ ಸಂಬಂಧ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ.. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ..

ನಟಿ ಪವಿತ್ರ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ನಡೆದಿತ್ತು . ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂಬ ಕಾರಣಕ್ಕಾಗಿ ಈ ಕೊಲೆ ನಡೆದಿದೆ.

ನಟ ದರ್ಶನ್ ಜೊತೆ ನಟಿ ಪವಿತ್ರಾ ಗೌಡ ಆಪ್ತರಾಗಿದ್ದಾರೆ. ಇನ್ನು ನಟಿ ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು ಎನ್ನಲಾಗಿದೆ.. ಹೀಗಾಗಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದ್ದು, ಇದುವರೆಗೆ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

 ಜೂನ್ 9ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ  ಬೆಂಗಳೂರಿಗೆ ಕರೆತಂದು, ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಇರಿಸಲಾಗಿತ್ತು. ಅಲ್ಲಿಯೇ ಹತ್ಯೆ ಮಾಡಿ ಮೋರಿಯಲ್ಲಿ ಮೃತದೇಹ ಎಸೆಯಲಾಗಿತ್ತು..

 

Share Post