BengaluruCinemaPolitics

ನಟ ದರ್ಶನ್‌ ಪ್ರಕರಣ; ಡಿಕೆಶಿ ಭೇಟಿಯಾದ ವಿಜಯಲಕ್ಷ್ಮೀ ಹಾಗೂ ದಿನಕರ್

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A-2 ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಬಿಡಿಸಿಕೊಂಡು ಬರಲು ಅವರ ಪತ್ನಿ ವಿಜಯಲಕ್ಷ್ಮೀ ಕಾನೂನು ಹೋರಾಟ ಮಾಡುತ್ತಿದ್ದಾರೆ.. ಇದರ ನಡುವೆ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.. ಭೇಟಿಗೆ ಸಮಯ ನಿಗಧಿ ಮಾಡಿಕೊಂಡಿದ್ದ ವಿಜಯಲಕ್ಷ್ಮೀ ಇಂದು ಬೆಂಗಳೂರಿನ ಸದಾಶಿವ ನಗರದ ಮನೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ದರ್ಶನ್‌ ಬಿಡಿಸಿಕೊಂಡು ಬರುವ ವಿಚಾರವಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ..

ಇದನ್ನೂ ಓದಿ; ಸೌದಿಯಿಂದ ಬಂದು ಅಣ್ಣನ ಮಗನನ್ನು ಗುಂಡಿಕ್ಕಿ ಕೊಂದ ಚಿಕ್ಕಪ್ಪ!; ಕ್ರೌರ್ಯಕ್ಕೆ ಕಾರಣ ಏನು..?

ನಿರ್ದೇಶಕ ಪ್ರೇಮ್‌, ದರ್ಶನ್‌ ಸಹೋದರ ತೂಗುದೀಪ ದಿನಕರ್‌ ಅವರೊಂದಿಗೆ ಆಗಮಿಸಿರುವ ವಿಜಯಲಕ್ಷ್ಮೀ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.. ದರ್ಶನ್‌ ಅವರನ್ನು ಸಂಕಷ್ಟದಿಂದ ಪಾರು ಮಾಡುವಂತೆ ವಿಜಯಲಕ್ಷ್ಮೀ ಅವರು ಡಿ.ಕೆ.ಶಿವಕುಮಾರ್‌ ಅವರನ್ನು ಕೋರಿದ್ದಾರೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ಪಾರಿವಾಳ ಉಳಿಸಲು ಹೋಗಿ ವಿದ್ಯುತ್‌ ತಂತಿಗೆ ಸಿಲುಕಿ 12 ವರ್ಷದ ಬಾಲಕ ಸಾವು!

ನಿನ್ನೆಯಷ್ಟೇ ಚನ್ನಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪಾಲ್ಗೊಂಡಿದ್ದರು.. ಈ ವೇದಿಕೆ ಕಾರ್ಯಕ್ರಮದಲ್ಲೇ ಡಿ.ಕೆ.ಶಿವಕುಮಾರ್‌ ಅವರು ದರ್ಶನ್‌ ವಿಚಾರವನ್ನು ಪ್ರಸ್ತಾಪ ಮಾಡಿದ್ದರು.. ವಿಜಯಲಕ್ಷ್ಮೀ ಅವರು ನನ್ನನ್ನು ಭೇಟಿಯಾಗಲು ಅಪಾಯಿಂಟ್‌ಮೆಂಟ್‌ ಕೇಳಿದ್ದಾರೆ.. ನಾಳೆ ವಿಜಯಲಕ್ಷ್ಮೀಯವರನ್ನು ನನ್ನನ್ನು ಭೇಟಿಯಾಗುತ್ತಾರೆ.. ಭೇಟಿ ನಂತರ ನ್ಯಾಯ ಏನಿದೆ ಎಂಬುದನ್ನು ಪರಿಶೀಲನೆ ಮಾಡೋದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದರು..

Share Post