CinemaPolitics

ದರ್ಶನ್ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶ; ಪವಾಡವೆಂಬಂತೆ ಪಾರು!

ಮಂಡ್ಯ; ನಟ ದರ್ಶನ್ ಅವರು ನಿನ್ನೆಯಿಂದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ. ಇಂದು ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಪ್ರಚಾರ ನಡೆಸಿದ್ದು, ಈ ವೇಳೆ ಭಾರಿ ಅನಾಹುತದಿಂದ ದರ್ಶನ್ ಪಾರಾಗಿದ್ದಾರೆ.

  ಅಗ್ರಹಾರ ಬಾಚನಹಳ್ಳಿ ಬಳಿ ದರ್ಶನ್ ರೋಡ್ ಶೋ ನಡೆಸುತ್ತಿದ್ದರು. ಈ ವೇಳೆ ಅವರ ಪ್ರಚಾರ ವಾಹನಕ್ಕೆ ವಿದ್ಯುತ್ ಸ್ಪರ್ಶವಾಗಿದೆ. ಅದ್ರೆ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ದರ್ಶನ್ ಪಾರಾಗಿದ್ದಾರೆ.

 ದರ್ಶನ್ ಅವರಿದ್ದ ಪ್ರಚಾರ ವಾಹನ ವೇಗವಾಗಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ವಿದ್ಯುತ್ ತಂತಿ ತಗಲುತ್ತಿದ್ದಂತೆ ಅದು ತುಂಡಾಗಿ ಕೆಳಗೆ ಬಿದ್ದಿದೆ. ಇದರಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

  ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.. ಇದಾದ ಮೇಲೆ ದರ್ಶನ್ ಅವರು ಪ್ರಚಾರ ಅರ್ಧಕ್ಕೆ ನಿಲ್ಲಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

 

Share Post