BengaluruCinema

ರಾವಣನಾಗಿ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರಂತೆ ನಟ ಯಶ್‌..!

ಬೆಂಗಳೂರು; ಕೆಜಿಎಫ್‌ ಸಿನಿಮಾ ಮೂಲಕ ಇಡೀ ದೇಶಕ್ಕೆ ಪರಿಚಯವಾದ ನಟ ಯಶ್‌ ಗೆ ಈಗ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಇನ್ನು ಅವರು ಬಾಲಿವುಡ್‌ಗೆ ಎಂಟ್ರಿ ಕೊಡ್ತಾರೆ ಎಂಬ ಮಾತುಗಳು ಹಲವಾರು ದಿನಗಳಿಂದ ಕೇಳಿಬರುತ್ತಿದ್ದವು. ಇದೀಗ ಯಶ್‌ ಅವರು ಬಾಲಿವುಡ್‌ನಲ್ಲಿ ನಟಿಸೋದಕ್ಕೆ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಮಾಯಣವನ್ನು ಹಿಂದಿಯಲ್ಲಿ ಸಿನಿಮಾ ಮಾಡಲಾಗುತ್ತಿದೆ. ಇದರಲ್ಲಿ ರಾವಣನಾಗಿ ನಟ ಯಶ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಯಶ್‌ ಈ ಬಗ್ಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹೀಗಿರುವಾಗಲೇ ಈ ಸಿನಿಮಾ ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಇನ್ನು ಸದ್ಯ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನಲಾಗಿದೆ.

ಮಾರ್ಚ್ 2024ರಲ್ಲಿ ರಾಮಾಯಣ ಸಿನಿಮಾ ಸೆಟ್ಟೇರಬಹುದು. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್ ನಿರ್ವಹಿಸಲಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ಬಣ್ಣ ಹಚ್ಚಲಿದ್ದಾರೆ ಎಂದು ತಿಳಿದುಬಂದಿದೆ.

 

Share Post