CinemaNational

ನಿತ್ಯಾನಂದ ಅಂದ್ರೆ ನನಗಿಷ್ಟ, ಅವರನ್ನೇ ಮದುವೆಯಾಗ್ತೀನಿ; ಜೇಮ್ಸ್‌ ನಟಿ ಪ್ರಿಯಾ..!!

ಬೆಂಗಳೂರು; ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ ಜೇಮ್ಸ್‌ ಚಿತ್ರದಲ್ಲಿ ನಟಿಸಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್‌ ನೀಡಿರುವ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ. ಮಲಯಾಳ, ತೆಲುಗು, ಕನ್ನಡ, ತಮಿಳು ಚಿತ್ರಗಳಲ್ಲಿ ನಟಿಸಿರುವ ಪ್ರಿಯಾ ಆನಂದ್‌, ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅದರಲ್ಲಿ ಮದುವೆ ಅಂತೂ ಆದರೆ ನಿತ್ಯಾನಂದರನ್ನೇ ಮದುವೆಯಾಗುತ್ತೇನೆ ಎಂದಿದ್ದಾರೆ. 

ನಿತ್ಯಾನಂದ ಸ್ವಾಮೀಜಿ ಅಂದರೆ ನನಗೆ ತುಂಬಾ ಇಷ್ಟ. ಅವರಲ್ಲಿ ಏನೋ ಒಂದು ವಿಶೇಷತೆ ಇದೆ. ಆದ್ದರಿಂದ ಅವರನ್ನು ಎಲ್ಲರೂ ಇಷ್ಟಪಡುತ್ತಾರೆ. ನಾನು ಮದುವೆ ಅಂತ ಆದರೆ ನಿತ್ಯಾನಂದ ಸ್ವಾಮಿಯನ್ನೇ ಆಗಬೇಕು ಅನ್ನೋ ಅಸೆ ಇದೆ ಎಂದು ಪ್ರಿಯಾ ಆನಂದ್‌ ಹೇಳಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

ನಿತ್ಯಾನಂದನ ವಿರುದ್ಧ ಲೈಂಗಿಕ ಕಿರುಕುಳದ ಕೇಸ್‌ಗಳಿವೆ. ಈ ಕಾರಣಕ್ಕೇ ಆತ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಕೈಲಾಸ ಎಂಬ ದೇಶ ಕಟ್ಟಿರೋದಾಗಿ ಹೇಳುತ್ತಿದ್ದಾನೆ. ಇನ್ನು ಆತ ಸಮಾಧಿ ಸ್ಥಿತಿಗೆ ತಲುಪಿದ್ದಾನೆ, ಆತ ಸತ್ತೇ ಹೋಗಿದ್ದಾನೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಇನ್ನೊಂದೆಡೆ ನಿತ್ಯಾನಂದನ ಜೊತೆ ಕೈಲಾಸಕ್ಕೆ ಹೋಗಿದ್ದ ಹಲವು ಯುವತಿಯರು ಆತನಿಂದ ಕಿರುಕುಳಕ್ಕೆ ಒಳಗಾಗಿ ತಪ್ಪಿಸಿಕೊಂಡು ಬಂದಿದ್ದಾರೆ. ನಿತ್ಯಾನಂದನ ವಿರುಧ್ಧ ಹಲಾವರು ಮಂದಿ ಆರೋಪಗಳು ಮಾಡುತ್ತಿರುವ ಸಂದರ್ಭದಲ್ಲಿ ಬಹುಭಾಷಾ ಚಲುವೆ ಪ್ರಿಯಾ ಆನಂದ್‌ ಈ ರೀತಿಯ ಹೇಳಿಕೆ ನೀಡಿರುವುದು ಅಚ್ಚರಿ ತರಿಸಿದೆ.

ಪ್ರಿಯಾ ಆನಂದ್‌ ಈ ಮಾತನ್ನು ತಮಾಷೆಯಾಗಿ ಹೇಳಿದ್ದಾರೋ ಅಥವಾ ನಿಜವಾಗಿಯೂ ಹೇಳಿದ್ದಾರೋ ಗೊತ್ತಿಲ್ಲ. ಆದ್ರೆ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಚರ್ಚೆಯಾಗುತ್ತಿರುವುದಂತೂ ನಿಜ.

 

ಲಯಾಳಂನ ಖ್ಯಾತ ನಟಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.  ಅಮೆರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಖ್ಯಾತಿಪಡೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಜೇಮ್ಸ್ ಸೇರಿದಂತೆ ಕನ್ನಡದ ಕೆಲ ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆಯೂ ಇವರದ್ದು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಪ್ರಿಯಾ ಆನಂದ್ ತಮ್ಮ ಮದುವೆಯ ಬಗ್ಗೆ ಕೆಲವು ಆಸಕ್ತಿದಾಯಕ ಮಾತುಗಳನ್ನು ಆಡಿದ್ದಾರೆ.

ನಿತ್ಯಾನಂದ ಮೇಲೆ ಈಗಾಗಲೇ ಭಾರತದಲ್ಲಿ ಹಲವು ಕೇಸುಗಳಿವೆ. ಅವುಗಳಿಂದ ತಪ್ಪಿಸಿಕೊಳ್ಳಲು ದೇಶ ತೊರೆದು ಈಕ್ವೆಡಾರ್ ಬಳಿಯ ಒಂದು ದ್ವೀಪದಲ್ಲಿ ತಮ್ಮದೇ ದೇಶ ಕಟ್ಟಿಕೊಂಡಿದ್ದಾರೆ.  ತಮ್ಮದೆ ಆದ ವಿಶೇಷ ಕರೆನ್ಸಿಯನ್ನು ಸಹ ಮುದ್ರಿಸಿದ್ದಾರೆ. ತಮ್ಮ ದೇಶಕ್ಕೆ ಬರುವ ಭಕ್ತರು ನೇರವಾಗಿ ಶಿವನ ದರ್ಶನ ಮಾಡಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಆದರೆ, ಸದ್ಯ ನಿತ್ಯನಂದನ ಬಗ್ಗೆ ಸುದ್ದಿಯೇ ಇಲ್ಲ. ಕೆಲವು ತಿಂಗಳ ಹಿಂದೆ, ನಿತ್ಯಾನಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ವರದಿಗಳು ಬಂದಿದ್ದವು. ಇದರ ನಡುವೆ ಖ್ಯಾತ ನಟಿ ಪ್ರಿಯಾ ಅವರ ಈ ಹೇಳಿಕೆಗಳು ಅಭಿಮಾನಗಳಲ್ಲಿ ಅಚ್ಚರಿ ಮೂಡಿಸಿದೆ. ನಿತ್ಯಾನಂದ ಅವರಿಗೆ ಈ ವಿಷಯವನ್ನು ತಲುಪಿಸುವುದು ಹೇಗೆ ಎಂಬ ಚರ್ಚೆ ಕೂಡ ನಡೆದಿದೆ. ಇದೊಂದು ತಮಾಷೆಯ ಮಾತಾಗಿದ್ದರೂ, ಪ್ರಿಯಾ ಆನಂದ್ ಗೆ ನಿತ್ಯಾನಂದನ ಮೇಲೆ ಅದು ಹೇಗೆ ಪ್ರೀತಿ ಮೂಡಿತು ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

Share Post