CinemaCrime

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಯಾವುದದು ಕೇಸ್‌..?

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಪರದಾಡುತ್ತಿದ್ದಾರೆ.. ಹೀಗಿರುವಾಗಲೇ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ.. ಚಿತ್ರ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣ ಈಗ ಮತ್ತೆ ಮರುಜೀವ ಪಡೆದುಕೊಂಡಿದೆ..
2022ರಲ್ಲಿ ಸಿನಿಮಾ ಒಂದರ ಸಂಬಂಧ ನಿರ್ಮಾಪನಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು.. ಆಗಲೇ ಕೆಂಗೇರಿ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.. ಈಗ ಮತ್ತೆ ಬೆದರಿಕೆ ಕೇಸ್ ಅಡಿಯಲ್ಲಿ ಆರೋಪಿ ಧೃವನ್ ಅಲಿಯಾಸ್ ಸೂರಜ್ ಕುಮಾರ್, ನಟ ದರ್ಶನ್, ದರ್ಶನ್ ಮ್ಯಾನೇಜರ್ ನಾಗರಾಜ್ ವಿರುದ್ಧ ಎನ್‌ಸಿಆರ್ ದಾಖಲಾಗಿದೆ..
ಭರತ್‌ ಎಂಬುವವರು ಭಗವಾನ್‌ ಶ್ರೀಕೃಷ್ಣಾ ಎಂಬ ಸಿನಿಮಾ ನಿರ್ಮಾಣ ಮಾಡುತ್ತಿದ್ದರು.. ಧೃವನ್‌ ಎಂಬುವವರು ಅದರಲ್ಲಿ ನಾಯಕ ನಟ.. 2020ರಲ್ಲಿ ಶೂಟಿಂಗ್‌ ಶುರು ಮಾಡಲಾಗಿತ್ತು.. ಆದ್ರೆ ಕರೋನಾ ಹಿನ್ನೆಲೆಯಲ್ಲಿ ಅರ್ಧಕ್ಕೇ ಶೂಟಿಂಗ್‌ ನಿಂತಿತ್ತು.. ಇದನ್ನು ಮುಂದುವರೆಸುವ ವಿಚಾರವಾಗಿ ನಿರ್ಮಾಪಕನಿಗೆ ಬೆದರಿಕೆ ಹಾಕಲಾಗಿತ್ತು ಎಂಬ ಆರೋಪವಿದೆ.. ಈ ಸಂಬಂಧ ಆಡಿಯೋ ಒಂದು ಕೂಡಾ ರಿಲೀಸ್‌ ಆಗಿತ್ತು.. 2022ರ ಆ.5 ರಂದು ಧೃವನ್ ಮೇಲೆ ಎನ್‌ಸಿಆರ್ ದಾಖಲಾಗಿತ್ತು.

Share Post