Cinema

ಸಿಎಂ ಬೊಮ್ಮಾಯಿಗೆ ಧನ್ಯವಾದ ಸಲ್ಲಿಸಿದ ಪುನೀತ್‌ ಪತ್ನಿ ಅಶ್ವಿನಿ

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಅವರ ಗಂಧದಗುಡಿ ಸಾಕ್ಷ್ಯಚಿತ್ರ ಟೈಟಲ್‌ ಟೀಸರ್‌ಗೆ ಶುಭ ಕೋರಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪುನೀತ್‌ ಪತ್ನಿ ಅಶ್ವಿನಿ ಧನ್ಯವಾದ ಸಲ್ಲಿಸಿದ್ದಾರೆ. ನಿನ್ನೆ ಗಂಧದ ಗುಡಿ ಸಾಕ್ಷ್ಯಚಿತ್ರ ನೋಡಿ ಶುಭಕೋರಿ ಟ್ವೀಟ್‌ ಮಾಡಿದ್ದರು. ಇದಕ್ಕೆ ರಿ ಟ್ವೀಟ್‌ ಮಾಡಿರುವ ಅಶ್ವಿನಿ ಸಿಎಂಗೆ ಧನ್ಯವಾದ ಅರ್ಪಿಸಿದ್ದಾರೆ.

‘ಗಂಧದ ಗುಡಿ’ಯನ್ನು ನಾಡಿನ ಪ್ರತಿಯೊಬ್ಬರಿಗೂ ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದು. ಈ ನಿಟ್ಟಿನಲ್ಲಿ ನೀವು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹಕ್ಕೆ ನಾವು ಸದಾ ಆಭಾರಿ ಎಂದು ಅಶ್ವಿನಿ ಟ್ವೀಟ್‌ ಮೂಲಕ ಸಿಎಂ ಬೊಮ್ಮಾಯಿಗೆ ಧನ್ಯವಾದ ಅರ್ಪಿಸಿದ್ದಾರೆ.

Share Post