Cinema

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಹಲ್ಲೆ

ವಿಜಯಪುರ; ಯುಗಾದಿ ಹಬ್ಬದ ಸಂದರ್ಭದಲ್ಲಿ ಆಂಧ್ರ ಶ್ರೀಶೈಲ ಕ್ಷೇತ್ರದಲ್ಲಿ ಕನ್ನಡಿಗ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆಯಾಗಿತ್ತು. ಅದ್ರಲ್ಲಿ ಕನ್ನಡಿಗರಿಗೆ ತೀವ್ರ ಗಾಯಗಳಾಗಿತ್ತು. ಇದೀಗ ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾಗಿದೆ. 

  ಶ್ರೀಶೈಲದಲ್ಲಿ ಕರ್ನಾಟಕದ ಸರ್ಕಾರಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ದಾಳಿ ನಡೆದಿದೆ. ಕಳೆದ ರಾತ್ರಿ ಕೆಎಸ್ಆರ್​ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಮೇಲೆ ಹಲ್ಲೆ ನಡೆದಿದೆ. ಕಿಡಿಗೇಡಿಗಳು ವಿಜಯಪುರ ಡಿಪೋಗೆ ಸೇರಿದ ಬಸ್​ನ ಕಿಟಕಿ ಗಾಜು ಒಡೆದಿದ್ದಾರೆ. ಬಳಿಕ ಚಾಲಕ ಹಾಗೂ ನಿರ್ವಾಹಕನ ಮೇಲೆ ದಾಳಿ ಮಾಡಲಾಗಿದೆ.

ಜೂನ್ 3ರ ಮಧ್ಯರಾತ್ರಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಶ್ರೀಶೈಲ ಬಸ್ ನಿಲ್ದಾಣದ‌ ಬಳಿ ವಾಹನ ನಿಲ್ಲಿಸಿದ್ದಾರೆ. ಬಳಿಕ ಊಟ ಮಾಡಿ ಕಟ್ಟೆಯ ಮೇಲೆ ಮಲಗಿದ್ದಾಗ ಏಕಾಏಕಿ ಬಂದ ಪುಂಡರ ಗುಂಪು ಹಲ್ಲೆ ಮಾಡಿದೆ.  ಈ ವೇಳೆ 10-12 ಜನರ ಪುಂಡರ ಗುಂಪು ಕನ್ನಡಿಗರ ಬಗ್ಗೆ ಅಶ್ಲೀಲ ಪದ ಬಳಸಿ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ.

Share Post