BengaluruCinemaCrime

ಸಿನಿಮಾ ಕೊರಿಯೋಗ್ರಾಫರ್‌ ನವ್ಯಾ ಬರ್ಬರ ಹತ್ಯೆ; ಕಂಪ್ಲೀಟ್‌ ಡಿಟೇಲ್ಸ್‌!

ಬೆಂಗಳೂರು; ಸಿನಿಮಾ ಕೊರಿಯೋಗ್ರಾಫರ್‌ ಆಗಿ ಕೆಲಸ ಮಾಡುತ್ತಿದ್ದ ಭದ್ರಾವತಿ ಮೂಲದ ನವ್ಯಾಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.. ಬೆಂಗಳೂರಿನ ಕೆಂಗೇರಿ ಬಳಿಯ ವಿಶ್ವೇಶ್ವರಯ್ಯ ಲೇಔಟ್‌ನ ಮನೆಯಲ್ಲಿ ಕುರ್ಚಿಗೆ ನವ್ಯಾಳನ್ನು ಕಟ್ಟಿಹಾಕಿ ಕತ್ತು ಕುಯ್ದು ಕೊಲೆ ಮಾಡಲಾಗಿದೆ.. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಕೊಲೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಪ್ರೀತಿಸಿ ಮದುವೆಯಾಗಿದ್ದ ಕಿರಣ್‌ ಎಂಬಾತನೇ ಈ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.. ಪೊಲೀಸರು ಆತನನ್ನು ವಶಕ್ಕೆ ತೆಗದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ..

ಇದನ್ನೂ ಓದಿ; ಪತಿ ಎಂದುಕೊಂಡು ಪರಪುರುಷನ ಜೊತೆ ರೊಮ್ಯಾನ್ಸ್‌; ಮುಂದೇನಾಯ್ತು?

ಕಿರಣ್‌ ಕ್ಯಾಬ್‌ ಚಾಲಕನಾಗಿದ್ದ.. ನವ್ಯಾ ಸಿನಿಮಾಗಳಲ್ಲಿ ಕೊರಿಯೋಗ್ರಾಫರ್‌ ಆಗಿ ಕೆಲಸ ಮಾಡುತ್ತಿದ್ದುದಲ್ಲದೆ, ಶಾಲೆಗಳಲ್ಲಿ ಮಕ್ಕಳಿಗೆ ನೃತ್ಯ ಕಲಿಸುತ್ತಿದ್ದಳು.. ಚಿಕ್ಕಬಳ್ಳಾಪುರ ಮೂಲದ ಕಿರಣ್‌ಗೆ ಭದ್ರಾವತಿ ಮೂಲದ ನವ್ಯಾ ಪರಿಚಯವಾಗಿದ್ದಳು.. ಅದು ಪ್ರೀತಿಗೆ ತಿರುಗಿ ಇಬ್ಬರೂ ಮೂರು ವರ್ಷದ ಹಿಂದೆ ಮದುವೆಯಾಗಿದ್ದರು.. ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಮನೆ ಬಾಡಿಗೆಗೆ ಪಡೆದು ವಾಸವಿದ್ದರು.. ಆದ್ರೆ ಕಿರಣ್‌ ಚಿಕ್ಕ ಚಿಕ್ಕ ವಿಷಯಕ್ಕೆಲ್ಲಾ ನವ್ಯಾ ಜೊತೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ..

ಇದನ್ನೂ ಓದಿ; ಭೂಮಿ ಮೇಲೆ ಗಂಡಸರೇ ಇಲ್ಲದಂತಾಗ್ತಾರಾ..?; ಆಘಾತಕಾರಿ ಸಂಶೋಧನೆ!

ನವ್ಯಾ ಶೀಲ ಶಂಕಿಸುತ್ತಿದ್ದ ಕಿರಣ್‌ ಯಾವಾಗಲೂ ಜಗಳ ಕಾಯುತ್ತಿದ್ದ ಎಂದು ಹೇಳಲಾಗುತ್ತಿದೆ.. ಈ ಕಾರಣದಿಂದಲೇ ಇಂದು ಮಧ್ಯಾಹ್ನ ಪತ್ನಿಯ ಜೊತೆ ಜಗಳವಾಡಿದ್ದಾನೆ.. ನಂತರ ಆಕೆಯನ್ನು ಕುರ್ಚಿಗೆ ಕಟ್ಟಿ ಹಾಕಿ, ಕತ್ತು ಕುಯ್ದು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.. ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ..

Share Post