CinemaCrime

ಕೌಟುಂಬಿಕ ಕಲಹಕ್ಕೆ ದಂಪತಿ ಬಲಿ; ಮಂಡ್ಯದಲ್ಲಿ ನೇಣಿಗೆ ಕೊರಳೊಡ್ಡಿದ ಗಂಡ-ಹೆಂಡತಿ!

ಮಂಡ್ಯ; ಮಂಡ್ಯದಲ್ಲಿ ಕೌಟುಂಬಿಕ ಕಲಹಕ್ಕೆ ದಂಪತಿ ಬಲಿಯಾಗಿದ್ದಾರೆ.. ಶ್ರೀರಂಗಪಟ್ಟಣ ಬಳಿ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ.. ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ರಾತ್ರಿ ಪತ್ನಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದರೆ, ಗಂಡ ಮಧ್ಯರಾತ್ರಿಯಲ್ಲಿ ಜಮೀನೊಂದರಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ..

ಬಾಬುರಾಯನ ಕೊಪ್ಪಲು ಗ್ರಾಮದ ಪ್ರಭಾವತಿ (45), ದಿಲೀಪ್ (45) ದಂಪತಿಯೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.. ಇಬ್ಬರ ನಡುವೆ ಕೌಟುಂಬಿಕ ಜಗಳವಿತ್ತು.. ಆಗಾಗ ಇಬ್ಬರೂ ಜಗಳವಾಡಿಕೊಳ್ಳುತ್ತಿದ್ದರು.. ಇದೇ ಕಾರಣಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.. ಪತ್ನಿಯ ಸಾವನ್ನಪ್ಪಿ ಅರಗಿಸಿಕೊಳ್ಳಲಾಗದ ಪತಿ, ಮಧ್ಯ ರಾತ್ರಿ ಜಮೀನೊಂದಕ್ಕೆ ಹೋಗಿ ಅಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..

ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ..

 

Share Post