CinemaHealth

ಖ್ಯಾತ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

ಬೆಂಗಳೂರು; ಖ್ಯಾತ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲೇ ಅವರು ಆತ್ಮಹತ್ಯೆಗೆ ಯತ್ನ ಮಾಡಿದ್ದು,ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.

 ‘ಅಪ್ಪು ಪಪ್ಪು’, ‘ಸ್ನೇಹಿತರು’ ಸೇರಿ ಹಲವು ಸಿನಿಮಾಗಳನ್ನು ಸೌಂದರ್ಯ ಜಗದೀಶ್ ನಿರ್ಮಾಣ ಮಾಡಿದ್ದರು. ಜೊತೆಗೆ ಸಿನಿಮಾ ವಿತರಕರಾಗಿಯೂ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೆಟ್​ಲಾಗ್​ ಪಬ್​ ಹೊಂದಿದ್ದಾರೆ.  ಬಿಲ್ಡರ್​ ಕೂಡ ಆಗಿದ್ದ ಜಗದೀಶ್, ನಟ ದರ್ಶನ್​, ರಾಕ್​ಲೈನ್​ ವೆಂಕಟೇಶ್​ ಮುಂತಾದ ಸೆಲೆಬ್ರಿಟಿಗಳ ಜೊತೆ ಅವರು ಆಪ್ತ ಒಡನಾಟ ಹೊಂದಿದ್ದರು.

ಅನೇಕ ವಿವಾದಗಳ ಕಾರಣದಿಂದಲೂ ಸೌಂದರ್ಯ ಜಗದೀಶ್​ ಅವರು ಆಗಾಗ ಸುದ್ದಿ ಆಗಿದ್ದರು. ನೆರೆಹೊರೆಯವರ ಜೊತೆ ಅವರ ಕುಟುಂಬದವರು ಗಲಾಟೆ ಮಾಡಿಕೊಂಡಿದ್ದು ಕೂಡ ಭಾರಿ ವಿವಾದ ಸೃಷ್ಟಿಸಿತ್ತು. ಕೆಲವೇ ತಿಂಗಳ ಹಿಂದೆ ‘ಕಾಟೇರ’ ಚಿತ್ರತಂಡದವರು ‘ಜೆಟ್​ಲಾಗ್​’ ಪಬ್​ನಲ್ಲಿ ರಾತ್ರಿ ಅವಧಿ ಮೀರಿ ಪಾರ್ಟಿ ಮಾಡಿದ ಆರೋಪ ಕೂಡ ಕೇಳಿಬಂದಿತ್ತು. ಆ ಬಳಿಕ 25 ದಿನಗಳ ಕಾಲ ರೆಸ್ಟೋ ಬಾರ್​ ಲೈಸೆನ್ಸ್​ ರದ್ದು ಮಾಡಲಾಗಿತ್ತು. ಮೂಲಗಳ ಪ್ರಕಾರ, ಕೆಲವೇ ದಿನಗಳ ಹಿಂದೆ ಬ್ಯಾಂಕ್​ನವರು ಸೌಂದರ್ಯ ಜಗದೀಶ್​ ಅವರ ಮನೆಯನ್ನು ಸೀಜ್​ ಮಾಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ‌ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Share Post