Cinema

ಸಂಗೊಳ್ಳಿ ರಾಯಣ್ಣನ ಪುತ್ಥಳಿ ವಿವಾದ – ನಟ ದರ್ಶನ್‌ ಆಕ್ರೋಶ

ಬೆಂಗಳೂರು : ನಟ ದರ್ಶನ್‌ ಕನ್ನಡ ಪರ ಹೋರಾಟಗಳಲ್ಲಿ ಸದಾ ಮುಂದಿರುತ್ತಾರೆ. ಈಗ ಭುಗಿಲೆದ್ದಿರುವ ಕನ್ನಡ ಹೋರಾಟಕ್ಕೆ ಸಂಬಂಧಿಸಿದಂತೆ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ವಿಕೃತಿಗೊಳಿಸಲಾಗಿತ್ತು. ಈ ವಿಚಾರವಾಗಿ ದರ್ಶನ್‌ ಮೌನ ಮುರಿದಿದ್ದಾರೆ. ತಮ್ಮ ಸಾಮಾಜಿಕ ಖಾತೆಯ ಮೂಲಕ ಸಿಎಂ ಅವರನ್ನು ಮನವಿ ಮಾಡಿಕೊಂಡಿದ್ದಾರೆ.

ಸಂಗೊಳ್ಳಿ ರಾಯಣ್ಣ ಸಿನಿಮಾದಲ್ಲಿ ಸಂಗೊಳ್ಳಿ ರಾಯಣ್ಣನಾಗಿ ಮಿಂಚಿದ್ದರು ನಟ ದರ್ಶನ್

ದರ್ಶನ್‌ ಟ್ವೀಟ್‌ನಲ್ಲಿ ಏನಿದೆ ?

ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು @CMofKarnataka 

 

Share Post