BengaluruCinema

ಶಿವಣ್ಣ ನೇತೃತ್ವದಲ್ಲಿ ಚಿತ್ರರಂಗದಿಂದ ಬಂದ್‌ಗೆ ಸಾಥ್‌; ವಾಣಿಜ್ಯ ಮಂಡಳಿ ಬಳಿ ಪ್ರತಿಭಟನೆ

ಬೆಂಗಳೂರು; ನಾಳಿನ ಕರ್ನಾಟಕ ಬಂದ್‌ಗೆ ಚಿತ್ರರಂಗ ಕೂಡಾ ಬೆಂಬಲ ಘೋಷಣೆ ಮಾಡಿದೆ. ನಾಳೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಕಾವೇರಿ ಹೋರಾಟ ನಡೆಯಲಿದೆ. ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ.ಸುರೇಶ್‌ ಅವರು ಶಿವರಾಜ್‌ಕುಮಾರ್‌ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಪ್ರತಿಭಟನೆಯ ನೇತೃತ್ವ ವಹಿಸಲು ಶಿವರಾಜ್‌ಕುಮಾರ್‌ ಒಪ್ಪಿಗೆ ಸೂಚಿಸಿದ್ದಾರೆ.
ಭೇಟಿ ಬಳಿಕ ಮಾತನಾಡಿರುವ ಫಿಲ್ಮ್‌ ಚೇಂಬರ್‌ ಅಧ್ಯಕ್ಷ ಎನ್‌.ಎಂ.ಸುರೇಶ್‌, ಶಿವಣ್ಣ ಅವರು ನಮ್ಮನ್ನು ತುಂಬಾ ಗೌರವಯುತವಾಗಿ ನಡೆಸಿಕೊಂಡರು. ಅವರು ಬಂದ್‌ಗೆ ಬೆಂಬಲ ಕೊಟ್ಟಿದ್ದಾರೆ. ನಾಳೆ ಅವರ ನೇತೃತ್ವದಲ್ಲೇ ಚಿತ್ರರಂಗ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ. ಧ್ರುವ ಸರ್ಜಾ, ಪ್ರೇಮ್, ಅಜಯ್ ರಾವ್, ಶ್ರೀಮುರಳಿ, ವಿಜಯ್ ರಾಘವೇಂದ್ರ, ವಿನೋದ್ ಪ್ರಭಾಕರ್, ಮಾಲಾಶ್ರೀ, ಶ್ರುತಿ, ಪ್ರೇಮಾ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿವಾನಂದ ಸರ್ಕಲ್​ ಬಳಿಯ ಕಲ್ಯಾಣ ಮಂಟಪದ ಬಳಿ ಚಿತ್ರರಂಗದಿಂದ ಪ್ರತಿಭಟನೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಶಿವರಾಜ್‌ಕುಮಾರ್‌ ಅವರು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗ್ತಾರೆ. ಇನ್ನು ನಾಳೆ ಚಿತ್ರೀಕರಣ, ಪ್ರದರ್ಶನ ಏನೂ ಇರುವುದಿಲ್ಲ.

Share Post