BengaluruCinemaPolitics

ಸಿಎಂ ಸಿದ್ದರಾಮಯ್ಯ ಭೇಟಿಯಾದ ಶಿವರಾಜ್‌ಕುಮಾರ್‌ ದಂಪತಿ

ಬೆಂಗಳೂರು; ನಟ ಶಿವರಾಜ್‌ ಕುಮಾರ್‌ ದಂಪತಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಸಚಿವ ಮಧು ಬಂಗಾರಪ್ಪ ಅವರ ಜೊತೆ ಶಿವರಾಜ್‌ ಕುಮಾರ್‌ ಹಾಗೂ ಗೀತಾ ಶಿವರಾಜ್‌ಕುಮಾರ್‌ ಅವರು ಸಿಎಂ ಅವರನ್ನು ಭೇಟಿಯಾಗಿ ಶುಬ ಕೋರಿದರು. ಕೆಲಕಾಲ ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದರು.

ನಟ ಶಿವರಾಜ್ ಕುಮಾರ್ ದಂಪತಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದರು. ಗೀತಾ ಶಿವರಾಜ್‌ ಕುಮಾರ್‌ ಅವರ ಸಹೋದರ ಮಧು ಬಂಗಾರಪ್ಪ ಅವರು ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರು. ಈ ಕಾರಣಕ್ಕಾಗಿ ಗೀತಾ ಶಿವರಾಜ್‌ ಕುಮಾರ್‌ ಅವರು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿ ಪ್ರಚಾರಕ್ಕಿಳಿದಿದ್ದರು. ಪತ್ನಿಗೆ ಶಿವರಾಜ್‌ ಕುಮಾರ್‌ ಸಾಥ್‌ ನೀಡಿದ್ದರು. ಶಿವರಾಜ್‌ ಕುಮಾರ್‌ ಅವರು ಸಿದ್ದರಾಮಯ್ಯ ಅವರ ಪರವಾಗಿ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು.

Share Post