BengaluruCinema

ಕೋಟ್ಯಾಂತರ ಹೃದಯಗಳಲ್ಲಿ ಅಪ್ಪು ಅಜರಾಮರ-ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಇಂದು ಪುನೀತ್‌ ರಾಜ್‌ಕುಮಾರ್‌ ಎಲ್ಲರನ್ನು ಅಗಲಿ ಐದು ತಿಂಗಳು ಕಳೆದಿವೆ. ಆದರೂ ಯಾವೊಬ್ಬ ಅಭಿಮಾನಿಯ ಮನದಲ್ಲೂ ಅವರು ಅಷ್ಷಳಿಯದಂತೆ ಚಿರಸ್ಥಾಯಿಯಾಗಿ ಉಳಿದಿದ್ದಾರೆ. 47ನೇ ವರ್ಷದ ಹುಟ್ಟು ಹಬ್ಬಕ್ಕೆ ವಿಶ್ವದಾದ್ಯಂತ ಶುಭಾಷಯಗಳ ಮಹಾಪೂರ ಹರಿದುಬರುತ್ತಿದೆ. ಇಂದು ತೆರೆಕಂಡ ಜೇಮ್ಸ್‌ ಸಿನಿಮಾ ಕೂಡ ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ. ಸೆಲೆಬ್ರೆಟಿಗಳು ಸೇರಿದಂತೆ ರಾಜಕೀಯ ಗಣ್ಯರು ಶುಭಾಷಯಗಳನ್ನು ತಿಳಿಸಿದ್ದಾರೆ.

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ  ಟ್ವೀಟ್‌ ಮಾಡಿ ಹಾರೈಸಿದ್ದಾರೆ. ಪುನೀತ್ ರಾಜಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ ಸರಳ,‌ ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ್ದ ಅವರ ಪ್ರತಿಭಾಶಾಲಿ ವ್ಯಕ್ತಿತ್ವ ಪ್ರೇರಕಶಕ್ತಿಯಾಗಿ ಕೋಟ್ಯಂತರ ಹೃದಯದಲ್ಲಿ ಅಜರಾಮರ. ಹುಟ್ಟುಹಬ್ಬದ ದಿನ ಅಪ್ಪುವನ್ನು ಪ್ರೀತಿ ಮತ್ತು ದು:ಖದಿಂದ ಸ್ಮರಿಸುತ್ತೇನೆ. #PuneethRajkumar? ಎಂದು ಟ್ವೀಟ್‌ ಮಾಡಿದ್ದಾರೆ.

Share Post