CrimeDistricts

ಚಿತ್ರದುರ್ಗ ಬಳಿ ಭೀಕರ ಅಪಘಾತ; ಮೂವರ ದುರ್ಮರಣ

ಚಿತ್ರದುರ್ಗ; ಚಿತ್ರದುರ್ಗದ ಮದಕರಿಪುರದ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮದಕರಿಪುರ ಬ್ರಿಡ್ಜ್ ಬಳಿ ಕಾರು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಈ ದುರಂತ ನಡೆದಿದೆ. ಮೃತರೆಲ್ಲರೂ ಬೆಂಗಳೂರು ಮೂಲದವರು.

 ನಿರ್ಮಲ (55), ವಿನುತ (40), ಯಶಸ್(2) ಮೃತ ದುರ್ದೈವಿಗಳು.  ಫಣಿರಾಜು(37), ರಶ್ಮಿ (27) ಎಂಬವವರು ಕೂಡಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕಾರಿನಲ್ಲಿ ಬೆಂಗಳೂರಿನಿಂದ ಹೊಸಪೇಟೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

Share Post