CrimeDistricts

ಚನ್ನಗಿರಿ ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ದಾವಣಗೆರೆ; ಟ್ರ್ಯಾಕ್ಟರ್ ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.

 

   ಮೃತರು ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದವರು.  ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಇನ್ನು ರತ್ನಮ್ಮ ಎಂಬುಔರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಇವರು ಓಮ್ನಿ ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

 

Share Post