BengaluruCrime

ಹನ್ನೊಂದು ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್‌

ಬೆಂಗಳೂರು; ಕೊನೆಗೂ ಸ್ಯಾಂಟ್ರೋ ರವಿ ಸಿಕ್ಕಿಬಿದ್ದಿದ್ದಾನೆ. ಗುಜರಾತ್‌ನಲ್ಲಿ ಅಡಗಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಕಳೆದ ಹನ್ನೊಂದು ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡುತ್ತಿದ್ದ ಸ್ಯಾಂಟ್ರೋ ರವಿ ಪೊಲೀಸರಿಗೆ ಸಿಕ್ಕಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿತ್ತು. ರಾಮನಗರ, ಮಂಡ್ಯ, ಮೈಸೂರು, ಕೇರಳದಲ್ಲಿ ಈ ನಾಲ್ಕೂ ತಂಡಗಳು ಕಾರ್ಯಾಚರಣೆ ನಡೆಸಿದ್ದವು. ಆದ್ರೆ ಸ್ಯಾಂಟ್ರೋ ರವಿ ಪೊಲೀಸರ ಕಣ್ತಪ್ಪಿಸಿ ಗುಜರಾತ್‌ಗೆ ಪರಾರಿಯಾಗಿದ್ದ.

 

Share Post