CrimeNational

ಪಶ್ಚಿಮ ಬಂಗಾಳದಲ್ಲಿ ಭೀಕರ ದುರಂತ; 10 ಮಂದಿ ದಾರು ಸಾವು

ಕೋಲ್ಕತ್ತಾ; ಇಲ್ಲಿನ ಕೂಚ್‌ ಬೇಹರ್‌ ಜಿಲ್ಲೆಯಲ್ಲಿ ಭೀಕರ ದುರಂತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಣಿಕರಿದ್ದ ಪಿಕಪ್‌ ವಾಹನದಲ್ಲಿ ವಿದ್ಯುತ್‌ ಪ್ರವಹಿಸಿದ್ದರಿಂದ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ.

ದುರಂತದಲ್ಲಿ 16 ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಜಲ್‌ಪೈಗುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಡಿಜೆ ಸಿಸ್ಟಂನ ಜನರೇಟರ್‌ನ ವೈರಿಂಗ್‍ನಿಂದ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೆಖ್ಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಧಾರ್ಲಾ ಸೇತುವೆಯ ಬಳಿ ವಾಹನದಲ್ಲಿ ವಿದ್ಯುತ್‌ ಪ್ರವಹಿಸಿದೆ.

ಗಾಯಾಳುಗಳನ್ನು ತಕ್ಷಣವೇ ಚಂದ್ರಬಂಧಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಪ್ರಾಥಮಿಕ ಚಿಕಿತ್ಸೆ ಕೊಟ್ಟ ಸ್ಥಾನಿಕ ವೈದ್ಯಾಧಿಕಾರಿಯು ಅವರನ್ನು ಜಲ್‍ಪೈಗುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.

Share Post