CrimePolitics

11 Death; ಛತ್ತಿಸ್‌ಗಢದಲ್ಲಿ ಭೀಕರ ಅಪಘಾತ; 11 ಮಂದಿ ದುರ್ಮರಣ

ರಾಯಪುರ; ಛತ್ತಿಸ್‌ ಗಢದ ರಾಯಪುರದ ಬಳಿ ಭೀಕರ ಅಪಘಾತ ನಡೆದಿದೆ. ದುರಂತದಲ್ಲಿ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಎಸ್‌ಯುವಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಕೂಡಾ ಸೇರಿದ್ದಾರೆ.

ಛತ್ತಿಸ್‌ಗಢ ಜಿಲ್ಲೆಯ ಬಲೋದ್‌ ಜಿಲ್ಲೆಯಲ್ಲಿ ಕಳೆದ ರಾತ್ರಿ ಈ ದುರಂತ ಸಂಭವಿಸಿದೆ. ಮೃತರೆಲ್ಲರೂ ಧಮತರಿ ಜಿಲ್ಲೆ ಸೋರಂ ಭಟ್‌ಗಾಂವ್‌ ಗ್ರಾಮದವರು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಈ ದುರಂತ ನಡೆದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಟ್ರಕ್‌ ಚಾಲಕ ಟ್ರಕ್‌ನ್ನು ಅಲ್ಲಿಯೇ ಬಿಟ್ಟಿ ಪರಾರಿಯಾಗಿದ್ದಾರೆ. ಕಾರಿನಲ್ಲಿದ್ದವರೆ ಪೈಕಿ ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಗುವೊಂದು ತೀವ್ರವಾಗಿ ಗಾಯಗೊಂಡಿತ್ತು. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದೆ.

Share Post