CrimeDistrictsHealth

ಮಧುಗಿರಿ ಬಳಿ 2 ಕಾರುಗಳ ಮುಖಾಮುಖಿ ಡಿಕ್ಕಿ; ಆರು ಮಂದಿ ದುರ್ಮರಣ!

ತುಮಕೂರು; ಕಳೆದ ರಾತ್ರಿ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೆರೆಗಳಪಾಳ್ಯ ಬಳಿ ಭೀಕರ ಅಪಘಾತ ನಡೆದಿದೆ.. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.. ಇದರಲ್ಲಿ ಒಂದು ವರ್ಷದ ಮಗು ಕೂಡಾ ಪ್ರಾಣ ತೆತ್ತಿದ್ದಾಳೆ..
ಮೃತರಲ್ಲಿ ಬಹುತೇಕರು ಪಾವಗಡ ತಾಲ್ಲೂಕಿನ ಎತ್ತಿನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ.. ಜನಾರ್ದನ ರೆಡ್ಡಿ(60), ಸಿಂಧೂ(33), ವೇದಾಸ್ ರೆಡ್ಡಿ(12), ಆನಂದ್(30), ಕಾರೇನಹಳ್ಳಿ ಗ್ರಾಮದ ನಾಗರಾಜ್, ಸಿದ್ದಗಂಗಾ(35) ಮೃತಪಟ್ಟವರು ಎಂದು ಗುರುತಿಸಲಾಗಿದೆ.. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ..
ಕೆಎ-03 NB 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರು ಹಾಗೂ ಕೆಎ-64 M 2627 ಸಂಖ್ಯೆಯ ಟಿಯಾಗೋ ಕಾರಿನ ನಡುವೆ ಈ ಅಪಘಾತ ನಡೆದಿದೆ.. ಘಟನೆಯಲ್ಲಿ ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ..

Share Post