CrimeDistrictsPolitics

2 Crore Money; ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಗನ ಮನೆಯಲ್ಲಿ 2 ಕೋಟಿ ರೂ. ಪತ್ತೆ

ಮಂಡ್ಯ; ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಟಿ ಕೋಟಿ ಹಣ ಹರಿದಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇನ್ನೇನು ಮತದಾನಕ್ಕೆ ಮೂರು ದಿನ ಇದೆ. ಈಗ ಮತ್ತಷ್ಟು ಚುನಾವಣಾ ಅಕ್ರಮಗಳು ನಡೆಯುತ್ತವೆ. ಹಾಗೆ ಮತದಾರರಿಗೆ ಹಂಚಲು ತಂದಿಟ್ಟಿದ್ದರು ಎನ್ನಲಾದ 2 ಕೋಟಿ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ದೂರು ಪಟ್ಟಣದ ದೊಡ್ಡ ಬೀದಿಯ ಮನೆಯೊಂದರಲ್ಲಿ ಈ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ.

ಮದ್ದೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಂ.ಉದಯ್‌ ಅವರ ಬೆಂಬಲಿಗರು ಎನ್ನಲಾದ ಸುರೇಶ್‌ ಹಾಗೂ ರಮೇಶ್‌ ಎಂಬುವವರ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ ಮಾಡಿದೆ. ಈ ವೇಳೆ ಎರಡು ಕೋಟಿ ರೂಪಾಯಿ ನಗದು ಸಿಕ್ಕಿದೆ. ಸುರೇಶ್‌ ಮನೆಯಲ್ಲಿ 2 ಕೋಟಿ ನಗದು ಸಿಕ್ಕಿದ್ದರೆ, ರಮೇಶ್‌ ನಿವಾಸದಲ್ಲಿ 3.50 ಲಕ್ಷ ರೂಪಾಯಿ ಸಿಕ್ಕಿದೆ. ಇದಕ್ಕೆ ಸೂಕ್ತ ದಾಖಲೆಗಳು ನೀಡದಿದ್ದ ಕಾರಣ ಹಣವನ್ನು ವಶಕ್ಕೆ ಪಡೆಯಲಾಗಿದೆ. ಸುರೇಶ್‌ ಬಾಬು ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share Post