CrimeInternational

ಬಸ್‌-ತೈಲ ಟ್ಯಾಂಕರ್‌ ಮುಖಾಮುಖಿ; 20 ಮಂದಿ ಸಜೀವ ದಹನ

ಲಾಹೋರ್; ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭೀಕರ ದುರಂತ ನಡೆದಿದ್ದು, 20 ಮಂದಿ ಸಜೀವ ದಹನವಾಗಿದ್ದಾರೆ. ಬಸ್ ಹಾಗೂ ತೈಲ ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ 20 ಜನ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಮುಲ್ತಾನ್–ಸುಕ್ಕೂರ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಈ ದುರಂತ ನಡೆದಿದೆ. ಟ್ರಕ್‌ ಕರಾಚಿಯಿಂದ ಲಾಹೋರ್‌ಗೆ ತೆರಳುತಿತ್ತು. ಬಸ್‌ ಲಾಹೋರ್‌ನಿಂದ ಮುಲ್ತಾನ್ ನಗರಕ್ಕೆ ಹೊರಟಿತ್ತು. ಬಸ್‌ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗವೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 20ಜನ ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯಲು ಸಾಧ್ಯವಾಗುತ್ತಿಲ್ಲ. ಡಿಎನ್‌ಎ ವರದಿ ನಂತರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share Post