CrimeDistricts

25 ವರ್ಷದ ಗೃಹಿಣಿ ನೇಣಿಗೆ ಶರಣು!; ಕಾರಣ ಏನು ಗೊತ್ತಾ..?

ಚಿಕ್ಕಮಗಳೂರು; ಗಂಡನ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.. 25 ವರ್ಷದ ಸುಭೀಕ್ಷಾ ಸಾವನ್ನಪ್ಪಿರುವ ಮಹಿಳೆಯಾಗಿದ್ದಾರೆ..

ಇದನ್ನೂ ಓದಿ; ಝೀಕಾ ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ; ಮೂವರು ಗರ್ಭಿಣಿಯರಿಗೆ ಸೋಂಕು!

ನಾಲ್ಕು ವರ್ಷದ ಹಿಂದೆ ಸುಭೀಕ್ಷಾ ಅವರು ಚಂದುವಳ್ಳಿಯ ಪ್ರವೀಣ್‌ ಎಂಬಾತನ ಜೊತೆ ಮದುವೆಯಾಗಿದ್ದು, ಇಬ್ಬರಿಗೂ ಎರಡೂವರೆ ವರ್ಷದ ಒಂದು ಗಂಡು ಮಗು ಇದೆ.. ಪತಿ ಹಾಗೂ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.. ಇದೇ ಕಾರಣಕ್ಕೆ ಸುಭೀಕ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.. ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.. ಬಾಳೂರು ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ..

ಇದನ್ನೂ ಓದಿ; ಬೆತ್ತಲೆಯಾಗಿ ಬಂದ ಮಹಿಳೆಯಿಂದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ!

Share Post