CrimeNational

ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್‌ ಸ್ಫೋಟ; ಮೂವರು ಬಲಿ

ಕೊಲ್ಕತ್ತಾ; ಟಿಎಂಸಿ ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಕಚ್ಚಾ ಬಾಂಬ್‌ ಸ್ಫೋಟವುಂಟಾಗಿ ಮೂವರು ಸಾವನ್ನಪ್ಪಿದ್ದಾರೆ. ಇದು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ..

ಮನೆಯಲ್ಲಿ ಬಾಂಬ್‌ ತಯಾರಿಸುತ್ತಿರುವ ವೇಳೆ ಕಚ್ಚಾ ಬಾಂಬ್‌ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ದುರ್ಘಟನೆಯಲ್ಲಿ ಟಿಎಂಸಿ ಮುಖಂಡ ರಾಜ್‌ಕುಮಾರ್‌ ಹಾಗೂ ಇತರ ಇಬ್ಬರು ಸಾವನ್ನಪ್ಪಿದ್ದಾರೆ. ಅವರನ್ನು ಬಿಸ್ವಜಿತ್‌, ದೇಬ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರಿಗೂ ಮಿಡ್ನಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share Post