CrimeNational

ನದಿಗೆ ಉರುಳಿದ ಯೋಧರು ಪ್ರಯಾಣಿಸುತ್ತಿದ್ದ ಬಸ್‌; 6 ಯೋಧರ ಸಾವು

ಶ್ರೀನಗರ; ಜಮ್ಮು ಕಾಶ್ಮೀರದಲ್ಲಿ ಯೋಧರು ಪ್ರಯಾಣಿಸುತ್ತಿದ್ದ ಐಟಿಬಿಪಿ ಬಸ್‌ ನದಿಗೆ ಉರುಳಿಬಿದ್ದಿದ್ದು, ಆರು ಯೋಧರು ದಾರುಣ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ32 ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

 

ಯೋಧರನ್ನು ಅಮರನಾಥ ಯಾತ್ರೆಯ ಭದ್ರತೆಗೆ ನಿಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರು ಸೇರಿ 37 ಯೋಧರು ಬಸ್‌ನಲ್ಲಿ ತೆರಳುತ್ತಿದ್ದಾಗ ಪಹಲ್ಗಾಮ್‌ ನಲ್ಲಿ ಬಸ್‌ ನದಿಗೆ ಉರುಳಿಬಿದ್ದಿದೆ. ಆರು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಗಾಯಾಗಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Share Post