CrimeNational

ಲಕ್ನೋದಲ್ಲಿ ಭಾರಿ ಮಳೆ; ಒಂಬತ್ತು ಕಾರ್ಮಿಕರ ದುರ್ಮರಣ

ಲಕ್ನೋ; ಭಾರೀ ಮಳೆಯಿಂದಾಗಿ ಗೋಡೆ ಕುಸಿದು 9 ಮಂದಿ ಸಾವಿಗೀಡಾಗಿ, ಇಬ್ಬರು ಗಂಭೀರ ಗಾಯಗೊಂಡಿರುವ ದಾರುಣ ದುರಂತ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಗಾಯಾಳುಗಳನ್ನು ಲಕ್ನೋದ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಮಿಕರು ದಿಲ್ಕುಶಾ ಪ್ರದೇಶದಲ್ಲಿನ ಆರ್ಮಿ ಎನ್‌ಕ್ಲೇವ್‌ನ ಹೊರಗೆ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ರಾತ್ರಿ ಭಾರೀ ಮಳೆಯಿಂದಾಗಿ, ಆರ್ಮಿ ಎನ್‌ಕ್ಲೇವ್‌ನ ಗಡಿ ಗೋಡೆ ಕುಸಿದು ಈ ದುರಂತ ನಡೆದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಮತ್ತು ಗಾಯಾಳುಗಳ ಚಿಕಿತ್ಸೆಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

 

Share Post