CrimeNational

ಸೇತುವೆ ಮೇಲಿಂದ ಉರುಳಿದ ರೈಲಿನ ಮೇಲೆ ಬಿದ್ದ ಕಾರು; ಮೂವರ ದುರ್ಮರಣ

ಮುಂಬೈ; ಕಾರೊಂದು ಸೇತುವೆ ಮೇಲಿಂದ ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿಬಿದ್ದಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮುಂಬೈ-ಪನ್ವೇಲ್ ರಸ್ತೆಯಲ್ಲಿ ನೇರಲ್ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರನ್ನು ಧರ್ಮಾನಂದ ಗಾಯಕ್ವಾಡ್ (41) ಮತ್ತು ಅವರ ಸಂಬಂಧಿಕರಾದ ಮಂಗೇಶ್ ಜಾಧವ್ (46) ಮತ್ತು ನಿತೀನ್ ಜಾಧವ್ (48) ಎಂದು ಗುರುತಿಸಲಾಗಿದೆ. ಇದರಲ್ಲಿ ಧರ್ಮಾನಂದ ಗಾಯಕ್ವಾಡ್‌ ಅವರು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಳೆ ಗುಂಪು) ದ ಕಾರ್ಯಕರ್ತ ಎಂದು ತಿಳಿದುಬಂದಿದೆ.

ಮುಂಜಾನೆ 3:30 ರಿಂದ 4 ಗಂಟೆ ಸುಮಾರಿಗೆ ಕಿನವಲಿ ಬಳಿಯ ಸೇತುವೆಯ ಮೇಲೆ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಉರುಳಿದ್ದು, ಚಲಿಸುತ್ತಿದ್ದ ಸರಕು ಸಾಗಣೆ ರೈಲಿನ ಮೇಲೆ ಬಿದ್ದಿದೆ. ಘಟನೆಯಲ್ಲಿಇನ್ನಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

 

Share Post