CrimeDistricts

ಹುಟ್ಟುಹಬ್ಬದಂದೇ ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ!

ಚಿಕ್ಕಬಳ್ಳಾಪುರ; ಕಾಲೇಜು ವಿದ್ಯಾರ್ಥಿನಿಯೊಬ್ಬಳು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಳು.. ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಕಾರಿನಲ್ಲಿ ಬರುತ್ತಿರುವಾಗ ಅಪಘಾತವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.. ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನ‌ ಬಳಿ ಡಿವೈಡರ್‌ಗೆ ಕಾರು ಡಿವೈಡರ್‌ಗೆ ಗುದ್ದಿದ್ದರಿಂದ ತೀವ್ರವಾಗಿ ಪೆಟ್ಟುಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ..

ಚಿಕ್ಕಬಳ್ಳಾಪುರ ತಾಲ್ಲೂಕಿನ‌ ಹೊನ್ನೇನಹಳ್ಳಿ ರಕ್ಷಿತಾ ಎಂಬ ವಿದ್ಯಾರ್ಥಿನಿಯೇ ಸಾವನ್ನಪ್ಪಿದವಳು.. ಈಕೆ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದಳು.. ಇಂದು ರಕ್ಷಿತಾಳ ಹುಟ್ಟುಹಬ್ಬವಿತ್ತು.. ಈ ಹಿನ್ನೆಲೆಯಲ್ಲಿ ಬಾಡಿಗೆ ಕಾರಿನಲ್ಲಿ ಹುಟ್ಟೂರಿಗೆ ಬರುತ್ತಿದ್ದಳು.. ಈ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಕಾರನ್ನು ಡಿವೈಡರ್‌ಗೆ ಡಿಕ್ಕಿ ಹೊಡೆಸಿದ್ದಾನೆ..

ಕಾರಿನ ಎಡಭಾಗದಲ್ಲಿ ವಿದ್ಯಾರ್ಥಿನಿ ರಕ್ಷಿತಾ ಕುಳಿತಿದ್ದಳು.. ಅದೇ ಭಾಗದಲ್ಲಿ ಅಪಘಾತವಾಗಿದ್ದರಿಂದ ರಕ್ಷಿತಾ ತೀವ್ರವಾಗಿ ಗಾಯಗೊಂಡಿದ್ದಳು.. ಆದ್ರೆ ಚಾಲಕ ನಿಶ್ವಾಂತ್‌ ಆಕೆಯನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡದೇ ಅಲ್ಲಿಂದ ಎಸ್ಕೇಪ್‌ ಆಗಿದ್ದಾನೆ..

ನಂದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ..

 

Share Post