CrimeNational

ಕಚೇರಿಯಲ್ಲೇ ಬಿಜೆಪಿ ಮುಖಂಡನ ಭೀಕರ ಹತ್ಯೆ

ನವದೆಹಲಿ; ಕಚೇರಿಯಲ್ಲೇ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯ ದ್ವಾರಕದಲ್ಲಿ ನಡೆದಿದೆ. ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಎಂಬುವವರೇ ಹತ್ಯೆಗೀಡಾದವರು. ಮುಖವಾಡ ಧರಿಸಿ ಬಂದಿದ್ದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಹಾಗೂ ಅವರ ಸೋದರಳಿಯ ಟಿವಿ ನೋಡುತ್ತಿದ್ದರು. ಈ ವೇಳೆ ಬಂದ ದುಷ್ಕರ್ಮಿಗಳು ಏಕಾಏಕಿ ನಾಲ್ಕೈದು ಬಾರಿ ಗುಂಡು ಹಾರಿಸಿದ್ದಾರೆ. ಕೃತ್ಯದಲ್ಲಿ ಮೂವರು ಆರೋಪಿಗಳು ಭಾಗವಹಿಸಿದ್ದು, ಇಬ್ಬರು ಒಳ ಬಂದು ಗುಂಡು ಹಾರಿಸಿದ್ದರೆ, ಮತ್ತೊಬ್ಬ ಬೈಕ್‌ ಮೇಲೆ ಹೊರಗೆ ಕಾಯುತ್ತಾ ಕುಳಿತಿದ್ದ. ಕೊಲೆ ಮಾಡಿದ ಮೇಲೆ ಮೂವರೂ ಪರಾರಿಯಾಗಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

Share Post