CrimeNational

ಅನಂತ್‌ನಾಗ್‌ನಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಹತ್ಯೆ

ಶ್ರೀನಗರ;  ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕಾರ್ಯಾಚರಣೆ ಮುಂದುವರೆದಿದೆ. ಹಲವು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಕೂಡಾ ಭದ್ರತಾ ಸಿಬ್ಬಂದಿ ಗುಂಡಿಗೆ ಓರ್ವ ಉಗ್ರ ಹತನಾಗಿದ್ದಾನೆ.

ಇಂದು ಮುಂಜಾನೆಯೇ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಅನಂತ್​ನಾಗ್​ನ ತಂಗ್​ಪಾವ ಸಮೀಪ ಉಗ್ರರು ಅಡಗಿದ್ದಾರೆಂಬ ಮಾಹಿತಿ ಭದ್ರತಾ ಸಿಬ್ಬಂದಿಗೆ ಸಿಕ್ಕಿತ್ತು. ಹೀಗಾಗಿ, ಮುಂಜಾನೆಯೇ ದಾಳಿ ನಡೆಸಲಾಗಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ. ಭದ್ರತಾ ಸಿಬ್ಬಂದಿ ದಾಳಿ ವೇಳೆ ಉಗ್ರರು ಕೂಡಾ ಪ್ರತಿದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Share Post