CrimeDistricts

ರೈಲಿಗೆ ತಲೆ ಕೊಟ್ಟು ಪೊಲೀಸ್‌ ಪೇದೆ ಆತ್ಮಹತ್ಯೆ!

ತುಮಕೂರು; ಕೆ.ಬಿ.ಕ್ರಾಸ್‌ ಪೊಲೀಸ್‌ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಪೊಲೀಸ್‌ ಕಾನ್ಸ್‌ಟೇಬಲ್‌ ಇಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ತುಮಕೂರು ಜಿಲ್ಲೆ ಗುಬ್ಬಿ ರೈಲ್ವೆ ಸ್ಟೇಷನ್‌ ಬಳಿ ಈ ಘಟನೆ ನಡೆದಿದೆ..

ಇದನ್ನೂ ಓದಿ; ಪ್ರತಿ ತಿಂಗಳೂ 10 ಸಾವಿರ ಹೂಡಿಕೆ ಮಾಡಿ 12 ಕೋಟಿ ರೂ. ಗಳಿಸಿ!

ಶಿವಪ್ರಕಾಶ್‌ ಆರಾಧ್ಯ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು.. ರೈಲು ಹಳಿ ಮೇಲೆ ತಲೆ ಕೊಟ್ಟು ಮಲಗಿದ್ದರಿಂದ ತಲೆ ಸಂಪೂರ್ಣ ಬೇರ್ಪಟ್ಟಿದೆ.. ಆತ್ಮಹತ್ಯೆಗೆ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ.. ಶಿವಪ್ರಕಾಶ್‌ ಆರಾಧ್ಯ ಅವರು ಈ ಹಿಂದೆ ತುರುವೇಕೆರೆ ಪೊಲೀಸ್‌ ಠಾಣೆಯಲ್ಲಿ ಕೆಲಸ ಮಾಡಿದ್ದರು. ಅನಂತರ ಕೆ.ಬಿ.ಕ್ರಾಸ್‌ ಠಾಣೆಗೆ ವರ್ಗಾವಣೆಯಾಗಿತ್ತು ಎಂದು ತಿಳಿದುಬಂದಿದೆ..

ಇದನ್ನೂ ಓದಿ; ಬಂದೂಕಿನಿಂದ ಪತ್ನಿಯನ್ನು ಗುಂಡಿಕ್ಕಿ ಕೊಂದ ವಿರಾಜಪೇಟೆಯ ವ್ಯಕ್ತಿ!

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ..

Share Post