BengaluruCrime

ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಅಪಹರಣ!; ದಾರಿಮಧ್ಯೆ ತಪ್ಪಿಸಿಕೊಂಡಿದ್ದೇ ರೋಚಕ!

ಬೆಂಗಳೂರು; ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಬಸ್‌ಗಾಗಿ ಕಾಯುತ್ತಿದ್ದಾಗ ಸ್ಥಳಕ್ಕೆ ಬಂದು ನಾಲ್ವರು ದುಷ್ಕರ್ಮಿಗಳು ಆಕೆಯನ್ನು ಅಪಹರಣ ಮಾಡಿದ್ದಾರೆ.. ಬೆಂಗಳೂರು ಪೀಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾಲಹಳ್ಳಿ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ.. ಜೂನ್‌ 6ರಂದೇ ಈ ಅಪಹರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ..

ಇದನ್ನೂ ಓದಿ; ಮಳೆಗಾಲದಲ್ಲಿ ಫುಡ್‌ ಪಾಯ್ಸನ್‌ ಆಗೋದು ಜಾಸ್ತಿ!; ಆಹಾರ ಸೇವನೆ ಬಗ್ಗೆ ಎಚ್ಚರಿಕೆ ಇರಲಿ..!

17 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜಾಲಹಳ್ಳಿ ಕ್ರಾಸ್‌ನಲ್ಲಿ ತುಮಕೂರಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಳು.. ಈ ವೇಳೆ ಆಕೆಯ ಮೇಲೆ ಮತ್ತು ಬರುವ ಔಷಧಿ ಸಿಂಪಡಿಸಿ ಪ್ರಜ್ಞೆ ತಪ್ಪಿಸಿ ಕಿಡ್ನ್ಯಾಪ್‌ ಮಾಡಿದ್ದಾರೆ.. ನಾಲ್ವರು ಯುವಕರು ಈ ಕಿಡ್ನ್ಯಾಪ್‌ ಮಾಡಿದ್ದು, ಕಾರಿನಲ್ಲಿ ಕೂರಿಸಿಕೊಂಡು ಮೈಸೂರಿನತ್ತ ಹೊರಟಿದ್ದರು.. ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿದ ರೀತಿಯಲ್ಲೇ ಇದ್ದಿದ್ದರಿಂದ ಒಂದು ಕಡೆ ಕಾರು ನಿಲ್ಲಿಸಿ, ಕಿಡ್ನಾಪರ್ಸ್‌ ಟೀ ಕುಡಿಯಲು ಹೋಗಿದ್ದಾರೆ.. ಈ ವೇಳೆ ವಿದ್ಯಾರ್ಥಿನಿ ತಪ್ಪಿಸಿಕೊಂಡಿದ್ದಾಳೆ.. ನಂತರ ಆಕೆ ಹೇಗೋ ಮೈಸೂರಿನ ಲಷ್ಕರ್‌ ಪೊಲೀಸ್‌ ಠಾಣೆಗೆ ಹೋಗಿ ಮಾಹಿತಿ ನೀಡಿದ್ದಾಳೆ..

ಇದನ್ನೂ ಓದಿ; ದಿನಕ್ಕೆ ಎರಡು ಖರ್ಜೂರ ತಿಂದರೆ ಸಾಕು ಫುಲ್‌ ಎನರ್ಜಿ ನಿಮ್ಮದಾಗುತ್ತೆ!

ಕಾರಿನಲ್ಲಿ ಇಬ್ಬರು ಯುವತಿಯರ ಜೊತೆ ನಾಲ್ವರು ಯುವಕರು ಇದ್ದರು ಎಂದು ತಿಳಿದುಬಂದಿದೆ.. ಸದ್ಯ ಪ್ರಕರಣವನ್ನು ಪೀಣ್ಯ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ.. ತನಿಖೆ ತೀವ್ರಗೊಳಿಸಲಾಗಿದೆ..

Share Post