CrimeNational

ಹೊಂಡಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್‌; ಹತ್ತು ಭಕ್ತರು ದರ್ಮರಣ

ಲಕ್ನೋ; ಭಕ್ತರನ್ನು ದೇವಸ್ಥಾನಕ್ಕೆ ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಹೊಂಡಕ್ಕೆ ಉರುಳಿಬಿದ್ದು ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 37 ಜನರನ್ನು ರಕ್ಷಣೆ ಮಾಡಲಾಗಿದೆ.

ಇಟೌಂಜಾದಲ್ಲಿ ಈ ದುರಂತ ನಡೆದಿದೆ. ಎಸ್‌ಡಿಆರ್‌ಎಫ್ ತಂಡ 37 ಜನರನ್ನು ರಕ್ಷಿಸಿದೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ 10 ಜನರು ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಟ್ರ್ಯಾಕ್ಟರ್‌ನಲ್ಲಿ 40ಕ್ಕೂ ಹೆಚ್ಚು ಮಂದಿ ಇದ್ದರು ಎಂದು ತಿಳಿದುಬಂದಿದೆ. ಎಲ್ಲರೂ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.

 

Share Post