CrimeDistricts

ಮಂಡ್ಯದ ಚಿನ್ನದ ವ್ಯಾಪಾರಿಯ ಹನಿಟ್ರ್ಯಾಪ್‌ ಕೇಸ್‌ಗೆ ಟ್ವಿಸ್ಟ್‌; ಆತ ಕರೆಸಿಕೊಂಡಿದ್ದು ಯಾರನ್ನ..?

ಬೆಂಗಳೂರು; ಮಂಡ್ಯ ಚಿನ್ನದ ವ್ಯಾಪಾರಿಯ ಹನಿಟ್ರ್ಯಾಪ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಪೊಲೀಸತು ತನಿಖೆ ನಡೆಸುತ್ತಿರುವಾಗಲೇ ದೂರು ಕೊಟ್ಟಿದ್ದ ವ್ಯಾಪಾರಿ ಜಗನ್ನಾಥ್‌ ಶೆಟ್ಟಿಯ ಆಡಿಯೋ ಹಾಗೂ ವಿಡಿಯೋ ಒಂದು ವೈರಲ್‌ ಆಗಿದ್ದು, ತನಿಖೆಯ ಮಜಲನನ್ನು ಬದಲಿಸಿದೆ.

ಮಂಡ್ಯದ ಚಿನ್ನದ ವ್ಯಾಪಾರಿ ಹಾಗೂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಆಗಸ್ಟ್ 19ರಂದು ಮಂಡ್ಯದ ಪಶ್ಚಿಮ ಠಾಣೆಗೆ ಕಿಡ್ನಾಪ್ ಮತ್ತು ಹನಿಟ್ರ್ಯಾಪ್ ದೂರು ದಾಖಲಿಸಿದ್ದರು.ಫೆಬ್ರವರಿ 26ರಂದು ಮೈಸೂರಿನಲ್ಲಿ ಈ ಕೃತ್ಯ ನಡೆದಿದ್ದು, ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದೆ. ಈ ವೇಳೆ ಮೈಸೂರಿಗೆ ಡ್ರಾಪ್ ಕೊಡುವುದಾಗಿ ತಿಳಿಸಿ ನಾಲ್ವರು ಕಾರಿನಲ್ಲಿ ಅವರನ್ನು ಕರೆದೊಯ್ದು ನಂತರ ಚಿನ್ನದ ಪರೀಕ್ಷೆಗೆಂದು ಅವರನ್ನು ಅಪಹರಿಸಿ ಲಾಡ್ಜ್ ರೂಮ್‍ಗೆ ಕರೆದೊಯ್ದಿದ್ದಾರೆ. ರೂಮ್‍ನಲ್ಲಿ ಯುವತಿ ಜೊತೆ ವೀಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಜಗನ್ನಾಥ್ ಶೆಟ್ಟಿ ಆರೋಪಿಸಿದ್ದರು.

ಆದ್ರೆ ಇದೀಗ ಆಡಿಯೋ, ವಿಡಿಯೋ ಬಹಿರಂಗವಾಗಿದ್ದು,  ವಿದ್ಯಾರ್ಥಿಯೊಬ್ಬಳನ್ನು ಲಾಡ್ಜ್‌ಗೆ ಕರೆಸಿಕೊಳ್ಳಲು ತಾನು ಲೆಕ್ಚರ್ ಎಂದು ಚಿನ್ನದ ವ್ಯಾಪಾರಿ ಜಗದೀಶ್ ಶೆಟ್ಟಿ ಪುಸಲಾಯಿಸಿದ್ದರು. ಮೈಸೂರಿನ ಲಾಡ್ಜ್‌ಗೆ ವಿದ್ಯಾರ್ಥಿನಿ ಕರೆಸಿಕೊಂಡ ವೇಳೆ ಅಲ್ಲಿಗೆ ಎಂಟ್ರಿಕೊಟ್ಟ ಆರೋಪಿ ಸಲ್ಮಾ ಬಾನು ಅಂಡ್‌ ಟೀಂ ಪಂಚೆ, ಬನಿಯನ್‌ನಲ್ಲಿದ್ದ ಜಗನಾಥ್ ಶೆಟ್ಟಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದರು. ನಂತರ ಜಗದೀಶ್ ಶೆಟ್ಟಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಎಳೆದಾಡಿ ಹೆದರಿಸಿದ್ದರು. ಈ ವೇಳೆ ತನ್ನದು ತಪ್ಪಾಯ್ತು ಎಂದು ಬಿಟ್ಟುಬಿಡಿ ಎಂದು ಜಗನ್ನಾಥ್ ಶೆಟ್ಟಿ ಕಾಲಿಗೆ ಬಿದು ಕ್ಷಮೆ ಕೇಳಿದ್ದಾರೆ. ಇದೀಗ ಈ ವೀಡಿಯೋ ವೈರಲ್ ಆಗುತ್ತಿದೆ.

Share Post