CrimeDistricts

ಅನೈತಿಕ ಸಂಬಂಧದಿಂದ ರೊಚ್ಚಿಗೆದ್ದ ಪತ್ನಿ; ಪತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ!

ಚಿತ್ರದುರ್ಗ;  ಪತಿ ಅನೈತಿಕ ಸಂಬಂಧ ಹೊಂದಿದ್ದರಿಂದ ಆಕ್ರೋಶಗೊಂಡ ಪತ್ನಿ, ಪತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಂಬದೇವರಹಟ್ಟಿಯಲ್ಲಿ ನಡುರಸ್ತೆಯಲ್ಲೇ ಈ ಕೃತ್ಯ ಎಸಗಲಾಗಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ..

46 ವರ್ಷದ ಕೃಷ್ಣಪ್ಪ ಎಂಬಾತನೇ ಪತ್ನಿಯಿಂದ ಭೀಕರವಾಗಿ ಕೊಲೆಯಾದ ವ್ಯಕ್ತಿಯಾಗಿದ್ದಾನೆ.. ಈತನ ಪತ್ನಿ ಕಮಲಮ್ಮ ಈ ಕೃತ್ಯ ಎಸಗಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾಳೆ.. ಗಂಡ ಬೇರೊಬ್ಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಹೇಳಲಾಗಿದೆ.. ಇದರಿಂದ ಆಕ್ರೋಶಗೊಂಡ ಕಮಲಮ್ಮ, ಪತಿ ಕೃಷ್ಣಪ್ಪ ಮನೆ ಎದುರು ಮಲಗಿದ್ದಾಗ ಆತನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ..  ಸ್ಥಳಕ್ಕೆ ಚಿತ್ರದುರ್ಗ DYSP ದಿನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share Post